ಬೆಂಗಳೂರು: ಬೆಳಗಾವಿ, ಹುಬ್ಬಳ್ಳಿ – ಧಾರವಾಡ, ಕಲ್ಬುರ್ಗಿ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಬಿಜೆಪಿ ಅಭೂತಪೂರ್ವ ಸಾಧನೆ ಮೆರೆದಿದೆ. ಈ ನಿಟ್ಟಿನಲ್ಲಿ ಬಿಜೆಪಿ ಮೇಲೆ ಭರವಸೆ ಇರಿಸಿದ ಮತದಾರರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ. ಪಿ. ನಡ್ಡಾ ಅವರು ಧನ್ಯವಾದ ಸಮರ್ಪಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲ್ಬುರ್ಗಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಮೇಲೆ ಭರವಸೆ ಇಟ್ಟ ಕರ್ನಾಟಕದ ಜನತೆಗೆ ಧನ್ಯವಾದಗಳು. ಹಿಂದೆಂದಿಗಿಂತಲೂ ದೊಡ್ಡ ಮಟ್ಟದಲ್ಲಿ ಗೆಲುವನ್ನು ಖಾತ್ರಿ ಪಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ಹಾಗೆಯೇ, ಜನಪರ ಯೋಜನೆಗಳನ್ನು ನೀಡಿದ ಸನ್ಮಾನ್ಯ ಪ್ರಧಾನಿ ಮೋದಿ ಅವರಿಗೆ ಧನ್ಯವಾದಗಳು. ನಾವು ಬೆಳಗಾವಿ ಪಾಲಿಕೆಯನ್ನು ಮೊದಲ ಬಾರಿ ಗೆದ್ದಿದ್ದೇವೆ. ಹುಬ್ಬಳ್ಳಿ – ಧಾರವಾಡ ಪಾಲಿಕೆಯ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವುದು, ಕಲ್ಬುರ್ಗಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವುದು ಕರ್ನಾಟಕ ಬಿಜೆಪಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದ್ದಾರೆ.
ಜನಪರ ಯೋಜನೆಗಳನ್ನು ನೀಡಿದ ಸನ್ಮಾನ್ಯ ಪ್ರಧಾನಿ @narendramodi ಅವರಿಗೆ ಧನ್ಯವಾದಗಳು. ನಾವು ಬೆಳಗಾವಿ ಪಾಲಿಕೆಯನ್ನು ಮೊದಲ ಬಾರಿಗೆ ಗೆದ್ದಿದ್ದೇವೆ.
ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವುದು & ಕಲಬುರ್ಗಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವುದು @BJP4Karnataka ಕ್ಕೆ ಹೆಮ್ಮೆಯ ವಿಷಯವಾಗಿದೆ.
— Office of JP Nadda (@OfficeofJPNadda) September 7, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.