ಬೆಂಗಳೂರು: ವಿಧಾನ ಮಂಡಲ ಅಧಿವೇಶನದ ಬಳಿಕ ಸಚಿವೆ ಶಶಿಕಲಾ ಜೊಲ್ಲೆ ಅವರು ರಾಜ್ಯಾದ್ಯಂತ ಇರುವ ಪ್ರಮುಖ ದೇವಾಲಯಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ಅವರು ಭಕ್ತಾಧಿಗಳ ಜೊತೆಗೆ ಸಂವಾದ ಸಹ ನಡೆಸಲಿದ್ದಾರೆ. ಹಾಗೆಯೇ ವಸತಿ, ಕುಡಿಯುವ ನೀರು, ಶೌಚಾಲಯ, ರಸ್ತೆಗಳಂತಹ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ.
ಈ ಬಗ್ಗೆ ಇತ್ತೀಚೆಗೆ ಇಲಾಖೆಯ ಅಧಿಕಾರಿಗಳ ಜೊತೆಗೂ ಸಭೆ ನಡೆಸಿರುವ ಅವರು, ಅವರು ವಿಧಾನ ಮಂಡಲದ ಅಧಿವೇಶನದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ದೇಗುಲಗಳಿಗೆ ಭೇಟಿಗೆ ನಿರ್ಧರಿಸಿದ್ದಾರೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.
ರಾಜ್ಯದ ಮುಜರಾಯಿ ಇಲಾಖೆಯ ಅಡಿಯಲ್ಲಿ 34,559 ದೇವಾಲಯಗಳು ಬರುತ್ತವೆ. ಅವುಗಳಲ್ಲಿ 175 ಎ ದರ್ಜೆ , 163 ಬಿ ದರ್ಜೆಯ ದೇಗುಲಗಳು, 34,221 ಸಿ ದರ್ಜೆಯ ದೇಗುಲಗಳಿದ್ದು, ಅಲ್ಲಿನ ಅರ್ಚಕರು ಮತ್ತು ಸಿಬ್ಬಂದಿಗಳಿಗೆ ಆಯಾ ದೇವಾಲಯದ ಟ್ರಸ್ಟ್ಗಳು ಸಂಬಳ ಪಾವತಿಸುತ್ತವೆ.
ಈ ಪ್ರವಾಸದ ಸಂದರ್ಭದಲ್ಲಿ ಸಚಿವರು ದೇವಾಲಯಗಳ ಆಡಳಿತದ ಜೊತೆಗೂ ಸಂವಾದ ನಡೆಸಲಾದ್ದಾರೆ. ಅನೇಕ ದೇಗುಲಗಳಲ್ಲಿ ಈ ಆಸ್ತಿ ಸರ್ಕಾರಕ್ಕೆ ಸೇರಿದೆ ಎಂಬುದನ್ನು ತೋರಿಸಲು ಬೋರ್ಡುಗಳಿಲ್ಲ. ಒತ್ತುವರಿ ತೆರವು ಮಾಡಬೇಕಿದೆ. ಈ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುತ್ತದೆ. ಹಲವು ದೇಗುಲಗಳಲ್ಲಿ ಸಿಬ್ಬಂದಿ ಕೊರತೆ ಇದ್ದು, ಈ ಬಗೆಗೂ ಸಚಿವರು ಗಮನ ಹರಿಸುವ ಸಾಧ್ಯತೆ ಇದೆ. ಬಳಿಕ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೂ ವರದಿ ನೀಡುವ ಸಾಧ್ಯತೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.