ಪುಲ್ವಾಮ: ಕಣಿವೆಯಲ್ಲಿ ವಿಶೇಷವಾಗಿ ತಮ್ಮ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಸುವ ಸಲುವಾಗಿ ಪುಲ್ವಾಮಾದ ಇಬ್ಬರು ಸಹೋದರರು ಸರ್ಕಾರದ ಸಹಾಯದಿಂದ ವರ್ಮಿಕಂಪೋಸ್ಟ್ ಘಟಕವನ್ನು ಸ್ಥಾಪಿಸಿದ್ದಾರೆ.
ಬಿಲಾಲ್ ಅಹ್ಮದ್ ಶೇಖ್ ಮತ್ತು ಅವರ ಸಹೋದರ ಮುನೀರ್ ಅಹ್ಮದ್ ಶೇಖ್ ಜೈವಿಕ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವೀಧರರು, ಇವರು ಪುಲ್ವಾಮಾದ ಮುರನ್ ಗ್ರಾಮದಲ್ಲಿ ಜೈವಿಕ ಗೊಬ್ಬರ ಮತ್ತು ಜೈವಿಕ ಕೀಟನಾಶಕಗಳನ್ನು ತಯಾರಿಸುವಲ್ಲಿ ನಿರತರಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಕೃಷಿ ಮತ್ತು ತೋಟಗಾರಿಕಾ ಇಲಾಖೆಯು ಘಟಕಕ್ಕೆ ತಾಂತ್ರಿಕ ಬೆಂಬಲವನ್ನು ಒದಗಿಸಿದೆ ಎಂದು ಬಿಲಾಲ್ ಹೇಳಿದ್ದಾರೆ.
“ನಾನು ಖಾಸಗಿ ಸಂಸ್ಥೆಯಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದೆ ಆದರೆ ಅದು ನನಗೆ ಸಾಕಷ್ಟು ಆದಾಯವನ್ನು ನೀಡುತ್ತಿರಲಿಲ್ಲ. ಹಾಗಾಗಿ, ನನ್ನ ಸಹೋದರ ಮತ್ತು ನಾನು ವರ್ಮಿಕಂಪೋಸ್ಟ್ ಘಟಕವನ್ನು ಸ್ಥಾಪಿಸಲು ನಿರ್ಧರಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.
“ನಾವು ಕೃಷಿ ಮತ್ತು ತೋಟಗಾರಿಕಾ ಇಲಾಖೆಯಿಂದ ಬೆಂಬಲವನ್ನು ಪಡೆದುಕೊಂಡಿದ್ದೇವೆ, ಅದು ನಮಗೆ ತಾಂತ್ರಿಕ ಬೆಂಬಲವನ್ನು ನೀಡುತ್ತಿದೆ” ಎಂದಿದ್ದಾರೆ.
ವರ್ಮಿಕಾಂಪೋಸ್ಟ್ ಬಗ್ಗೆ ಮಾತನಾಡಿದ ಮುನೀರ್, “ನಾವು ಮಣ್ಣು ಪರೀಕ್ಷೆ ಮಾಡುತ್ತೇವೆ ಮತ್ತು ರೈತರ ಅನುಕೂಲಕ್ಕಾಗಿ ಜೈವಿಕ ಗೊಬ್ಬರ ತಯಾರಿಸುತ್ತೇವೆ ಮತ್ತು ಎಲ್ಲಾ ರೈತರು ಉತ್ತಮ ಫಲಿತಾಂಶಗಳನ್ನು ಪಡೆದಿದ್ದಾರೆ” ಎಂದು ಹೇಳಿದ್ದಾರೆ.
“ಆರಂಭದಲ್ಲಿ ನಾವು ವಿವಿಧ ರೀತಿಯ ಕಷ್ಟಗಳನ್ನು ಎದುರಿಸುತ್ತಿದ್ದೆವು ಆದರೆ ಸರ್ಕಾರದ ಬೆಂಬಲದಿಂದ ನಮ್ಮ ಘಟಕವು ಜನಪ್ರಿಯವಾಗಿದೆ ಮತ್ತು ಅದು ಪ್ರಸ್ತುತ 15 ಜನರಿಗೆ ಉದ್ಯೋಗ ನೀಡಿದೆ ಎಂದು ಅವರು ಮಾಹಿತಿ ನೀಡಿದರು.
ಘಟಕದ ಉದ್ಯೋಗಿ ಅಬ್ದುಲ್ ಕರೀಮ್ ಪ್ರಯೋಜನಗಳ ಕುರಿತು ಮಾತನಾಡುತ್ತಾ, “ವರ್ಮಿಕಾಂಪೋಸ್ಟ್ ಪದ್ಧತಿಯ ಸಹಾಯದಿಂದ ತರಕಾರಿಗಳ ಗುಣಮಟ್ಟ ಸಹ ಸುಧಾರಿಸುತ್ತಿವೆ ಮತ್ತು ರೈತರು ಭವಿಷ್ಯದಲ್ಲಿ ಸಾಕಷ್ಟು ಪ್ರಯೋಜನಗಳನ್ನು ಪಡೆಯುತ್ತಾರೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.