ನವದೆಹಲಿ: ಅಫ್ಘಾನ್ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ರಷ್ಯಾದ ಭದ್ರತಾ ಮಂಡಳಿಯ ಕಾರ್ಯದರ್ಶಿ ಜನರಲ್ ನಿಕೋಲಾಯ್ ಪತ್ರುಶೇವ್ ಅವರ ನಡುವೆ ದೆಹಲಿಯಲ್ಲಿ ಮಹತ್ವದ ಸಭೆ ನಡೆದಿದೆ.
ಮಂಗಳವಾರ ಮುಂಜಾನೆ, ಕೇಂದ್ರ ಗುಪ್ತಚರ ಸಂಸ್ಥೆ (ಸಿಐಎ) ಮುಖ್ಯಸ್ಥ ವಿಲಿಯಂ ಬರ್ನ್ಸ್ ಕೂಡ ಅಫ್ಘಾನಿಸ್ಥಾನದಲ್ಲಿ ಉದ್ಭವಿಸುತ್ತಿರುವ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚಿಸುವ ಸಲುವಾಗಿ ನವದೆಹಲಿಗೆ ಆಗಮಿಸಿದ್ದಾರೆ. ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನು ಒಳಗೊಂಡ ಎರಡು ಪ್ರತ್ಯೇಕ ಸಭೆಗಳು ಕಾಬೂಲ್ ನಲ್ಲಿ ತಾಲಿಬಾನ್ ಸರ್ಕಾರ ರಚನೆಯ ಕುರಿತಂತೆ ನಡೆಯುತ್ತಿವೆ. ಪ್ರಸ್ತುತ ಬೆಳವಣಿಗೆಗಳು ಅಫ್ಘಾನಿಸ್ಥಾನ ಬಿಕ್ಕಟ್ಟಿನಲ್ಲಿ ಭಾರತದ ಕಾಳಜಿಯನ್ನು ಸಹ ಒತ್ತಿಹೇಳುತ್ತವೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಪತ್ರುಶೇವ್ ಅವರನ್ನು ಸ್ವಾಗತಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆಗಸ್ಟ್ 24 ರ ಫೋನ್ ಸಂಭಾಷಣೆಯ ನಂತರ ಈ ಸಭೆಗಳು ನಡೆಯುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.