ಧಾರವಾಡ: ರಾಜ್ಯದಲ್ಲಿ ಸಾರ್ವಜನಿಕರನ್ನು ಎಲ್ಲಿಯೂ ಹೋಗಬೇಡಿ ಎಂದು ನಿರ್ಬಂಧ ಹೇರುವುದು ಸಾಧ್ಯವಿಲ್ಲ. ಅವರವರ ಎಚ್ಚರ ಅವರವರೇ ಕಾಳಜಿ ಮಾಡಬೇಕು ಎಂದು ಮೈಸೂರು ಗ್ಯಾಂಗ್ ರೇಪ್ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅವರು ನಗರದ ಬೇಲೂರಿನ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿಶಾಮಕ ಠಾಣೆಯನ್ನು ಉದ್ಘಾಟಿಸಿ ಮಾತನಾಡಿ, ಅಪಾಯಕಾರಿ ಜಾಗಗಳಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಮಾಹಿತಿ ನೀಡಿದಲ್ಲಿ, ಅಂತಹ ಪ್ರದೇಶದಲ್ಲಿ ಅವರು ಹೆಚ್ಚಿನ ನಿಗಾ ಇರಿಸುವುದು, ಗಸ್ತು ಹೆಚ್ಚಿಸುವುದು ಮಾಡುತ್ತಾರೆ ಎಂದು ಹೇಳಿದ್ದಾರೆ.
ಹಾಗೆಯೇ ತೊಂದರೆ ಎದುರಾಗುವ, ಅಪಾಯಕ್ಕೆ ಸಿಲುಕಿ ಹಾಕಿಕೊಳ್ಳುವ ಸಂದರ್ಭದ ಸೂಚನೆ ಸಿಕ್ಕಲ್ಲಿ ತಕ್ಷಣವೇ 112 ಗೆ ಕರೆ ಮಾಡುವ ಮೂಲಕ ಮಾಹಿತಿ ನೀಡಬಹುದು. ಇಂತಹ ವ್ಯವಸ್ಥೆಗಳಿಂದ ಪೊಲೀಸ್ ಠಾಣೆಗೆ ತೆರಳುವ ಅಗತ್ಯತೆಯೂ ಇಲ್ಲ. ಇಂತಹ ಅನುಕೂಲಗಳ ಉಪಯೋಗ ಪಡೆಯುವ ಮೂಲಕ ಅವರವರ ಸುರಕ್ಷತೆಗೆ ಹೆಚ್ಚು ಕಾಳಜಿ ವಹಿಸುವಂತೆ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.