ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ 54.74% ಗಳಷ್ಟು ಪಠ್ಯ ಪುಸ್ತಕ ವಿತರಣೆ ಮಾಡಲಾಗಿದೆ ಎಂದು ಹೈಕೋರ್ಟ್ಗೆ ರಾಜ್ಯ ಸರ್ಕಾರ ತಿಳಿಸಿದೆ.
ಉಳಿದಂತೆ ಪಠ್ಯ ಪುಸ್ತಕಗಳ ಮುದ್ರಣ ಕಾರ್ಯ ಪ್ರಗತಿಯಲ್ಲಿದೆ. ಮುಂದಿನ 20 ದಿನಗಳಲ್ಲಿ ಪಠ್ಯ ಪುಸ್ತಕ ಪೂರೈಕೆ ಕಾರ್ಯ ಸಂಪೂರ್ಣವಾಗಲಿದೆ ಎಂದು ಸರ್ಕಾರ ಹೇಳಿದೆ. ಈ ಸಂಬಂಧ ಹೈಕೋರ್ಟ್ಗೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ಈ ಸಂಬಂಧ ಸರ್ಕಾರದ ಪರ ವಕೀಲರು ಈಗಾಗಲೇ 54.74% ಪಠ್ಯ ಪುಸ್ತಕಗಳನ್ನು ಶಾಲೆಗಳಿಗೆ ಒದಗಿಸಲಾಗಿದೆ. ಉಳಿದಂತೆ ಪುಸ್ತಕಗಳ ಮುದ್ರಣ ಕಾರ್ಯ 70% ಗಳಷ್ಟು ಸಂಪೂರ್ಣವಾಗಿದೆ. ಮುಂದಿನ 20 ದಿನಗಳ ಕಾಲಾವಕಾಶ ನೀಡಿದಲ್ಲಿ ಸಂಪೂರ್ಣ ಪ್ರಮಾಣದಲ್ಲಿ ಪಠ್ಯ ಪುಸ್ತಕಗಳನ್ನು ಒದಗಿಸಲಾಗುವುದು ಎಂದು ಮನವಿ ಮಾಡಿದರು.
ಈ ಮನವಿಯನ್ನು ದಾಖಲಿಸಿಕಂಡ ನ್ಯಾಯಾಲಯವು, ಮುಂದಿನ 20 ದಿನಗಳಲ್ಲಿ ಪಠ್ಯ ಪುಸ್ತಕ ಪೂರೈಕೆ ಕಾರ್ಯ ಸಂಪೂರ್ಣಗೊಳಿಸುವಂತೆ ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.