ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಮುಂಗಾರು ಅಧಿವೇಶನ ಸೆ. 13 – 24 ರ ವರೆಗೆ ನಡೆಯಲಿದ್ದು, ಈ ಅಧಿವೇಶನದಲ್ಲಿ 18 ವಿಧೇಯಕಗಳು ಮಂಡನೆಯಾಗಲಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದ್ದಾರೆ.
ಈ ಅಧಿವೇಶನ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಸಹಕಾರ ಕೋರಲಾಗುವುದು ಎಂದು ಅವರು ತಿಳಿಸಿದ್ದಾರೆ.
ಹಾಗೆಯೇ ಅಧಿವೇಶನದ ಕೊನೆಯ ದಿನ ಸೆ. 24 ರಂದು ಸಂಸದೀಯ ಮೌಲ್ಯಗಳಿಗೆ ಸಂಬಂಧಿಸಿದಂತೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಆಹ್ವಾನಿಸಲಾಗಿದೆ. ಅವರು ಆಗಮಿಸಿ ಜಂಟಿ ಸದನವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅವರನ್ನು ಆಹ್ವಾನಿಸುವ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಅಧಿವೇಶನ ವೀಕ್ಷಣೆಗೆ ಸಾರ್ವಜನಿಕರಿಗೂ ಅವಕಾಶ ನೀಡಲಾಗಿದೆ. ಆದರೆ ಶಾಲಾ ಮಕ್ಕಳನ್ನು ಕರೆತರುವಂತಿಲ್ಲ ಎಂದು ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಎಲ್ಲಾ ರೀತಿಯ ಕೊರೋನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಹಾಗೆಯೇ ಈ ಬಾರಿ ಅಧಿವೇಶನದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ಉತ್ತಮ ಶಾಸಕನನ್ನು ಗುರುತಿಸಲು ಸಿಎಂ ಬೊಮ್ಮಾಯಿ ಮತ್ತು ಎಲ್ಲಾ ಪಕ್ಷದ ಸದಸ್ಯರ ತಂಡವನ್ನು ರಚನೆ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.