ಬೆಂಗಳೂರು: ರಾಜ್ಯದ ಕೊರೋನಾ ಪೀಡಿತ ಬಡವರಿಗೆ ನೆರವಾಗಲು ಶೀಘ್ರದಲ್ಲೇ ಸರ್ಕಾರ ವಿಶೇಷ ಕಾರ್ಯಕ್ರಮ ಒಂದನ್ನು ರೂಪಿಸಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಕೊರೋನಾ ಸಾಂಕ್ರಾಮಿಕ ಸೋಂಕು ಜನರ ಬದುಕಿನ ಮೇಲೆ ವಿನಾಶಕಾರಿ ಪರಿಣಾಮ ಬೀರಿದೆ. ಹಲವು ಮಕ್ಕಳ ಹೆತ್ತವರು, ಪೋಷಕರನ್ನು ಕೊರೋನಾ ಕಿತ್ತುಕೊಂಡಿದ್ದು, ಅವರು ಅನಾಥರಾಗುವಂತಾಗಿದೆ. ಅನೇಕ ಬಡ ಕುಟುಂಬಗಳು ಕೊರೋನಾದಿಂದ ಮಕ್ಕಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಇವರೆಲ್ಲರಿಗೆ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತದೆ ಎಂದು ಹೇಳಿದ್ದಾರೆ.
ಈ ಹಿಂದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೊರೋನಾ ಪೀಡಿತರಿಗೆ ತಮ್ಮ ಮುಖ್ಯಮಂತ್ರಿ ಅವಧಿಯಲ್ಲಿ 1 ಲಕ್ಷ ಪರಿಹಾರ ಘೋಷಿಸಿದ್ದರು. ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಪಾವತಿ ಮಾಡುವಂತೆಯೂ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು. ಈ ನೆರವಿನ ಜೊತೆಗೆ ಕೊರೋನಾದಿಂದ ಸಂಕಷ್ಟಕ್ಕೆ ತುತ್ತಾದ ಬಡ ಮಕ್ಕಳ ವಿದ್ಯಾಭ್ಯಾಸ, ಆರೋಗ್ಯ, ಆರೈಕೆ, ಇತರರ ಮೇಲೆ ಅವರ ಅವಲಂಬನೆ ತಪ್ಪಿಸಲು ಸರ್ಕಾರ ಕಾರ್ಯಕ್ರಮವೊಂದನ್ನು ರೂಪಿಸಲಿದೆ ಎಂದು ಅವರು ಹೇಳಿದ್ದಾರೆ.
ವಿವರಗಳನ್ನು ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.