ಗಾಂಧಿನಗರ: ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಇಂದು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆಯನ್ನು ನೀಡಿದ್ದಾರೆ. ಈ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರೂಪಾನಿ, “ಗುಜರಾತ್ ರಾಜ್ಯದ ಅಭಿವೃದ್ಧಿಯ ಪಯಣ ಹೊಸ ನಾಯಕತ್ವದ ನೇತೃತ್ವದಲ್ಲಿ, ಹೊಸ ಉತ್ಸಾಹದೊಂದಿಗೆ ಮತ್ತು ಹೊಸ ಶಕ್ತಿಯೊಂದಿಗೆ ಮುನ್ನಡೆಯಬೇಕು ಎಂಬುದು ನನ್ನ ನಂಬಿಕೆ. ಇದನ್ನು ಗಮನದಲ್ಲಿಟ್ಟುಕೊಂಡು ನಾನು ಗುಜರಾತ್ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದಿದ್ದಾರೆ.
“ನನ್ನಂತಹ ಪಕ್ಷದ ಕಾರ್ಯಕರ್ತನಿಗೆ ಮುಖ್ಯಮಂತ್ರಿ ಆಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕೆ ನಾನು ಚಿರಋಣಿಯಾಗಿದ್ದೇನೆ” ಎಂದಿದ್ದಾರೆ.
“ಅವಧಿಯುದ್ದಕ್ಕೂ ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನವನ್ನು ನಾನು ಪಡೆದಿದ್ದೇನೆ. ಅವರ ಮಾರ್ಗದರ್ಶನದಲ್ಲಿ ಗುಜರಾತಿನ ಪ್ರಗತಿ ಉತ್ತುಂಗವನ್ನು ತಲುಪಿದೆ. ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಲು ಅವಕಾಶ ನೀಡಿದ್ದಕ್ಕಾಗಿ ಗೌರವಾನ್ವಿತ ಪ್ರಧಾನಿಗಳಿಗೆ ನಾನು ಕೃತಜ್ಞನಾಗಿದ್ದೇನೆ” ಎಂದಿದ್ದಾರೆ.
“ಸಂಘಟನಾತ್ಮಕ ಪಕ್ಷ ಮತ್ತು ಸಿದ್ಧಾಂತವಾಗಿ ಬಿಜೆಪಿಯು ತನ್ನ ಕಾರ್ಯಕರ್ತರಿಗೆ ನೀಡುವ ಜವಾಬ್ದಾರಿಗಳು ಬದಲಾಗುತ್ತಿರುತ್ತವೆ. ಕಾರ್ಯಕರ್ತರು ತಮಗೆ ದೊರೆತ ಜವಾಬ್ದಾರಿಯನ್ನು ಸಮರ್ಪಣಾ ಭಾವದೊಂದಿಗೆ ನಿಭಾಯಿಸುತ್ತಾರೆ. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ನಾನು ಪಕ್ಷಕ್ಕಾಗಿ ಕೆಲಸ ಮಾಡಲು ಬಯಸುತ್ತೇನೆ” ಎಂದಿದ್ದಾರೆ.
“ಮುಂದೆ ನೀಡುವ ಯಾವುದೇ ಜವಾಬ್ದಾರಿಯನ್ನು ನಾನು ಪ್ರಧಾನಿ ನರೇಂದ್ರ ಮೋದಿ ಅವರ ಮತ್ತು ಬಿಜೆಪಿಯ ರಾಷ್ಟ್ರಾಧ್ಯಕ್ಷರ ನಾಯಕತ್ವದಲ್ಲಿ ನಿಭಾಯಿಸಲು ಬಯಸುತ್ತೇನೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.