ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕಾರದ 7 ವರ್ಷಗಳ ಅವಧಿಯಲ್ಲಿ ಒಂದೇ ಒಂದು ರಜೆಯನ್ನು ಪಡೆದಿಲ್ಲ, ಅವರಂತೆಯೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಕೂಡ ತಮ್ಮ ಅಧಿಕಾರದ ನಾಲ್ಕು ವರ್ಷಗಳ ಅವಧಿಯಲ್ಲಿ ಒಂದೇ ಒಂದು ರಜೆಯನ್ನು ಪಡೆದುಕೊಂಡಿಲ್ಲ ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ಹೇಳಿದ್ದಾರೆ.
ಪ್ರಬುದ್ಧ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು,”ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕಾರವಧಿಯ 7 ವರ್ಷಗಳಲ್ಲಿ ಒಂದೇ ಒಂದು ರಜೆ ಪಡೆದುಕೊಂಡಿಲ್ಲ, ಎಲ್ಲಾ ಸಮಯವನ್ನು ಅವರು ಸಾರ್ವಜನಿಕರ ಸೇವೆಗಾಗಿ ವ್ಯಯಿಸಿದ್ದಾರೆ. ಅದೇ ರೀತಿ ಯೋಗಿ ಆದಿತ್ಯನಾಥ್ ಅವರು ಕೂಡ ರಜೆಯನ್ನು ಪಡೆದುಕೊಂಡಿಲ್ಲ. ರಾಜ್ಯ ಮತ್ತು ದೇಶ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವುದಕ್ಕೆ ಇದೇ ಕಾರಣ” ಎಂದು ಹೇಳಿದ್ದಾರೆ.
“ತನಗಾಗಿ ಅಲ್ಲ ಸಮಾಜಕ್ಕಾಗಿ ದುಡಿಯುವವನು ನಿಜವಾದ ದೇಶ ಭಕ್ತ. ಅಂಥವನು ಮಾತ್ರ ಬದಲಾವಣೆಯನ್ನು ತರುವ ಸಾಮರ್ಥ್ಯವನ್ನು ಹೊಂದಿರುತ್ತಾನೆ” ಎಂದಿದ್ದಾರೆ.
“ಜಾತಿ ಮತ್ತು ಪಂಥದ ಹೆಸರಿನಲ್ಲಿ ಬಿಜೆಪಿ ಯಾವತ್ತೂ ತಾರತಮ್ಯ ಮಾಡುವುದಿಲ್ಲ. ಕಳೆದ ನಾಲ್ಕುವರೆ ವರ್ಷಗಳಲ್ಲಿ ನಮ್ಮ ಸರಕಾರ ಜಾರಿಗೊಳಿಸಿದ ಯೋಜನೆಗಳಿಂದ ಎಲ್ಲ ವರ್ಗಗಳು ಮತ್ತು ಜನರು ಪ್ರಯೋಜನ ಪಡೆದಿದ್ದಾರೆ” ಎಂದಿದ್ದಾರೆ.
“ಹಿಂದೂ ಮತ್ತು ಮುಸ್ಲಿಮರ ನಡುವೆ ಕೂಡ ಬಿಜೆಪಿ ತಾರತಮ್ಯ ಮಾಡುವುದಿಲ್ಲ. ಇದೇ ಕಾರಣದಿಂದ ನಮ್ಮ ಅಧಿಕಾರ ಅವಧಿಯಲ್ಲಿ ಒಂದೇ ಒಂದು ಗಲಭೆಗಳು ನಡೆದಿಲ್ಲ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.