ಮೈಸೂರು: ಈ ಬಾರಿ ನಾಡಹಬ್ಬ ಮೈಸೂರು ದಸರಾ ಸಾಂಪ್ರದಾಯಿಕ ರೀತಿಯಲ್ಲಿ ಸರಳವಾಗಿ ನಡೆಯಲಿದ್ದು, ಇಂದು ಗಜ ಪಯಣಕ್ಕೆ ಚಾಲನೆ ದೊರೆತಿದೆ.
ಹುಣಸೂರು ವೀರನಹೊಸಹಳ್ಳಿಯಲ್ಲಿ ಗಜಪಡೆ ಪಯಣಕ್ಕೆ ಚಾಲನೆ ದೊರೆತಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 8 ಆನೆಗಳು ಕಾಡಿನಿಂದ ನಾಡಿಗೆ ಪಯಣ ಬೆಳೆಸಿವೆ. ದಸರಾ ಜಂಬೂ ಸವಾರಿಯಲ್ಲಿ 5 ಗಂಡಾನೆಗಳು ಮತ್ತು 3 ಹೆಣ್ಣಾನೆಗಳು ಭಾಗಿಯಾಗಲಿವೆ.
ಈ ಗಜ ಪಡೆ ಇಂದು ಸಂಜೆ ಅಶೋಕಪುರಂ ಅರಣ್ಯ ಭವನಕ್ಕೆ ಆಗಮಿಸಲಿದೆ. ಕೆಲ ದಿನಗಳ ಬಳಿಕ ಈ ಆನೆಗಳು ಅರಮನೆ ಕಡೆಗೆ ತೆರಳಲಿವೆ. ಈ ಸಂದರ್ಭದಲ್ಲಿ ಈ ಆನೆಗಳಿಗೆ ಸಾಂಪ್ರದಾಯಿಕ ರೀತಿಯಲ್ಲಿ ಪೂಜೆ ಸಲ್ಲಿಸಿ ಸ್ವಾಗತಿಸಲಾಗುತ್ತದೆ.
ಕೊರೋನಾ ಹಿನ್ನೆಲೆಯಲ್ಲಿ ಕಳೆದ ಬಾರಿಯಂತೆಯೇ ಈ ಬಾರಿಯೂ ಸರಳವಾಗಿ ವಿಶ್ವ ವಿಖ್ಯಾತ ನಾಡಹಬ್ಬ ದಸರಾವನ್ನು ಆಚರಣೆ ಮಾಡಲು ರಾಜ್ಯ ಸರ್ಕಾರ ಈಗಾಗಲೇ ತೀರ್ಮಾನಗಳನ್ನು ಕೈಗೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.