ಗುವಾಹಟಿ: ಮುಖ್ಯಮಂತ್ರಿ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರೊಂದಿಗೆ ಅಸ್ಸಾಂ ಮುಖ್ಯಮಂತ್ರಿ ಡಾ.ಹಿಮಂತ ಬಿಸ್ವ ಶರ್ಮಾ ಅವರು ಪ್ರಸ್ತುತ ನಡೆಯುತ್ತಿರುವ ಬುಡಕಟ್ಟು ಜೀವನೋಪಾಯ ಅಭಿವೃದ್ಧಿ ಕಾರ್ಯಕ್ರಮ ಮತ್ತು ರಾಜ್ಯದ ಬುಡಕಟ್ಟು ಜನರ ಕಲ್ಯಾಣ ಮತ್ತು ಅಭಿವೃದ್ಧಿಗಾಗಿ ಕೈಗೊಳ್ಳಬೇಕಾದ ಇತರ ಯೋಜನೆಗಳ ಬಗ್ಗೆ ಪರಿಶೀಲನಾ ಸಭೆ ನಡೆಸಿದರು.
ಗುವಾಹಟಿಯ ಕೊಯಿನಧೋರ ಗೆಸ್ಟ್ ಹೌಸ್ನಲ್ಲಿ ಭಾನುವಾರ ಸಭೆ ನಡೆದಿದ್ದು, ಸಭೆಯ ಆರಂಭದಲ್ಲಿ ಅಸ್ಸಾಂ ರಾಜ್ಯದಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳು ಮತ್ತು ಉದ್ದೇಶಿತ ಯೋಜನೆಗಳ ವಿವರವಾದ ಪ್ರಸ್ತುತಿಯನ್ನು ನೀಡಲಾಯಿತು.
ಮುಖ್ಯಮಂತ್ರಿ ಡಾ. ಶರ್ಮಾ ಮಾತನಾಡಿ, ಪ್ರಧಾನ ಮಂತ್ರಿಯವರ ಅಂತರ್ಗತ ಬೆಳವಣಿಗೆಯ ದೃಷ್ಟಿಕೋನಕ್ಕೆ ಅನುಗುಣವಾಗಿ, ಬುಡಕಟ್ಟು ಸಮುದಾಯಗಳನ್ನು ಒಳಗೊಂಡಂತೆ ಎಲ್ಲಾ ವರ್ಗದ ಜನರ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಹಲವಾರು ಯೋಜನೆಗಳನ್ನು ಕೈಗೊಂಡಿದೆ ಎಂದು ಹೇಳಿದರು.
ಅಸ್ಸಾಂನಲ್ಲಿ ಹೊಸ ವನ್ ಧನ್ ವಿಕಾಸ ಕೇಂದ್ರಗಳನ್ನು (VDVK) ಸ್ಥಾಪಿಸುವ ಬಗ್ಗೆ ಉಲ್ಲೇಖಿಸಿದ ಅವರು, ಮುಂದಿನ ವರ್ಷ ಮಾರ್ಚ್ ಒಳಗೆ ಇಂತಹ 400 ಕೇಂದ್ರಗಳನ್ನು ಸ್ಥಾಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದರು. ಯೋಜನೆಯನ್ನು ಸಕಾಲದಲ್ಲಿ ಪೂರ್ಣಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ಪ್ರಗತಿಯನ್ನು ನಿಯಮಿತವಾಗಿ ಪರಿಶೀಲಿಸುವುದಾಗಿ ಮುಖ್ಯಮಂತ್ರಿ ಹೇಳಿದರು.
ಅಲ್ಲದೆ 5 ಬುಡಕಟ್ಟು ಆಹಾರ ಪಾರ್ಕುಗಳು,7 ಏಕಲವ್ಯ ಮಾದರಿ ವಸತಿ ಶಾಲೆಗಳನ್ನು ಕೂಡ ಅಸ್ಸಾಂನಲ್ಲಿ ಸ್ಥಾಪನೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.