ಶ್ರೀನಗರ: ಶಿಕ್ಷಣ, ಉದ್ಯೋಗ, ಆರೋಗ್ಯ ರಕ್ಷಣೆ ಮತ್ತು ಭದ್ರತೆ ಕ್ಷೇತ್ರದಲ್ಲಿ ಸೇರಿದಂತೆ ವಿವಿಧ ವಲಯಗಳಲ್ಲಿ ಹಲವಾರು ಅವಕಾಶಗಳನ್ನು ಸೃಷ್ಟಿಸಲು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ.
ಅವರು ‘ಕಾಶ್ಮೀರ ಯಂಗ್ ಲೀಡರ್ಶಿಪ್ ಅವಾರ್ಡ್ಸ್’ ಸಮಾರಂಭದಲ್ಲಿ ಮಾತನಾಡಿದರು. ಈ ಸಮಾರಂಭದಲ್ಲಿ ಶ್ರೀನಗರದ ಯುವ ಪ್ರತಿಭೆಗಳಿಗೆ ಪ್ರಶಸ್ತಿಗಳನ್ನು ಪ್ರದಾನಿಸಲಾಯಿತು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಕೆಲಸ ಮಾಡಿದ ಪ್ರಶಸ್ತಿ ಪಡೆದ ಯುವ ಸಾಧಕರನ್ನು ಅವರು ಅಭಿನಂದಿಸಿದರು.
“ಯುವಕರೊಂದಿಗಿನ ನನ್ನ ನಿರಂತರ ಸಂವಾದದ ಸಮಯದಲ್ಲಿ ಕಾಶ್ಮೀರಿ ಯುವಕರಿಗೆ ಐದು ಪ್ರಮುಖ ಕಾಳಜಿಗಳಿವೆ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ: ಮೊದಲೆನೆಯದು, ಅವರು ತಮ್ಮ ಅರ್ಹತೆಗೆ ಅನುಗುಣವಾಗಿ ಉದ್ಯೋಗಗಳನ್ನು ಪಡೆಯಬೇಕು. ಎರಡನೆಯದಾಗಿ, ಅವರು ಉದ್ಯಮಿಗಳಾಗಲು ಸಾಕಷ್ಟು ಅವಕಾಶಗಳನ್ನು ಪಡೆಯಬೇಕು. ಮೂರನೆಯದಾಗಿ , ಮಾರುಕಟ್ಟೆಯ ಅವಶ್ಯಕತೆಗಳಿಗೆ ಅನುಗುಣವಾಗಿ ಆಧುನಿಕ ಶಿಕ್ಷಣದ ಪ್ರವೇಶ ಮತ್ತು ಕ್ರಿಯಾತ್ಮಕವಾಗಿ ಬದಲಾಗುತ್ತಿರುವ ಕೌಶಲ್ಯಗಳು ಸಿಗಬೇಕು. ನಾಲ್ಕನೆಯದಾಗಿ, ಉತ್ತಮ ಆಡಳಿತ ಪದ್ಧತಿಗಳ ಅನುಷ್ಠಾನ ಮತ್ತು ಭ್ರಷ್ಟಾಚಾರ ನಿರ್ಮೂಲನೆಯಾಗಬೇಕು ಮತ್ತು ಐದನೇಯದು ಆರೋಗ್ಯಕರ, ಶಾಂತಿಯುತ ಮತ್ತು ಸುರಕ್ಷಿತ ಜೀವನವನ್ನು ನಡೆಸಲು ಅವಕಾಶವನ್ನು ಹೊಂದಬೇಕು ಎಂದು ಸಿನ್ಹಾ ಹೇಳಿದ್ದಾರೆ.
ಶಿಕ್ಷಣ, ಉದ್ಯೋಗ, ಆರೋಗ್ಯ ರಕ್ಷಣೆ ಮತ್ತು ಭದ್ರತೆಯಲ್ಲಿ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸಲು ವಿವಿಧ ಕ್ಷೇತ್ರಗಳಲ್ಲಿ ನಿರಂತರ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಅವರು ಭರವಸೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.