ಬೆಂಗಳೂರು: ಕೊರೋನಾ ಸಾಂಕ್ರಾಮಿಕ ಸೋಂಕಿನ ಸಂಕಷ್ಟದ ನಡುವೆಯೂ ಉದ್ಯೋಗ ನಷ್ಟದಿಂದ ಕಷ್ಟಪಡುತ್ತಿದ್ದ ಸುಮಾರು 12 ಸಾವಿರ ಜನರಿಗೆ ಉದ್ಯೋಗ ನೀಡುವಲ್ಲಿ ರಾಜ್ಯ ಸರ್ಕಾರ ಸಫಲವಾಗಿದೆ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಿ, ಯುವ ಜನರಿಗೆ ಉದ್ಯೋಗ ಪಡೆದುಕೊಳ್ಳುವುದಕ್ಕೆ ಅನುಕೂಲ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಆ ಮೂಲಕ ಕೊರೋನಾದಿಂದ ಸಂಕಷ್ಟಕ್ಕೆ ಒಳಗಾಗಿದ್ದ ಜನರಿಗೆ ನೆರವಾಗಿರುವುದಾಗಿ ಅವರು ಹೇಳಿದ್ದಾರೆ.
ಹಾಗೆಯೇ ರಾಜ್ಯ ಸರ್ಕಾರ ಉದ್ಯೋಗ ಅರಸುತ್ತಿದ್ದ ಅಸಂಖ್ಯಾತ ಜನರಿಗೆ, ಕೌಶಲಾಧರಿತ ತರಬೇತಿಗಳನ್ನು ನೀಡಿ ವಿವಿಧ ಕಂಪೆನಿಗಳಲ್ಲಿ ಉದ್ಯೋಗ ಪಡೆಯುವುದಕ್ಕೂ ಅನುಕೂಲ ಒದಗಿಸಿದೆ. ಮುಂಬರುವ ದಿನಗಳಲ್ಲಿ ರಾಜ್ಯದ ಕೈಗಾರಿಕೆಗಳು ಸೇರಿದಂತೆ, ಎಲ್ಲಾ ವಲಯಗಳಲ್ಲಿಯೂ ಇರುವ ಬೇಡಿಕೆಗೆ ಅನುಗುಣವಾಗಿ ಕೌಶಲಪೂರ್ಣ ಯುವಜನರನ್ನು ತಯಾರು ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
ಕೊರೋನಾ ಬಳಿಕ ರಾಜ್ಯದಲ್ಲಿ ಇದೀಗ ಆರ್ಥಿಕತೆ ಚೇತರಿಕೆಯಾಗುತ್ತಿದೆ. ವಿಶ್ವದ ದೊಡ್ಡ ಚಲನಶೀಲ ನಗರ ಎಂಬ ಖ್ಯಾತಿಯನ್ನು ಪಡೆದಿರುವ ಬೆಂಗಳೂರಿನಲ್ಲಿ ಐಟಿ ಬಿಟಿ ಸೇರಿದಂತೆ ಎಲ್ಲಾ ವಲಯಗಳಲ್ಲಿಯೂ ಯುವಜನತೆಗೆ ಉದ್ಯೋಗ ಪಡೆಯಲು ವಿಪುಲ ಅವಕಾಶಗಳು ಸೃಷ್ಟಿಯಾಗಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.