ಬೆಂಗಳೂರು: ರಾಜ್ಯದಲ್ಲಿ ಕೆಲ ಸಮಯದ ಹಿಂದೆ ನಡೆದಿದ್ದ ಸಾರಿಗೆ ಮುಷ್ಕರದ ಸಂದರ್ಭದಲ್ಲಿ ಅಮಾನತು, ವಜಾ, ವರ್ಗಾವಣೆಗೆ ಒಳಗಾಗಿದ್ದ ನೌಕರರನ್ನು ಮತ್ತೆ ಕರ್ತವ್ಯಕ್ಕೆ ತೆಗೆದುಕೊಳ್ಳಲಾಗುವುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಸಾರಿಗೆ ನೌಕರರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಸಚಿವ ಬಿ. ಶ್ರೀರಾಮುಲು ಅವರು ಅಧಿಕಾರಿಗಳ ಸಭೆ ಕರೆದಿದ್ದರು. ಮುಷ್ಕರ ಸಂದರ್ಭದಲ್ಲಿ ಕೆಎಸ್ಆರ್ಟಿಸಿಯ ನಾಲ್ಕು ನಿಗಮಗಳಿಗೆ ಸಂಬಂಧಿಸಿದಂತೆ ಎರಡು ಸಾವಿರಕ್ಕೂ ಅಧಿಕ ನೌಕರರನ್ನು ಅಮಾನತು ಮಾಡಲಾಗಿತ್ತು. ಈ ಸಂಬಂಧ ಅರ್ಜಿಯು ಹೈಕೋರ್ಟ್ನಲ್ಲಿರುವುದಾಗಿಯೂ ಅಧಿಕಾರಿಗಳು ಸಚಿವರಿಗೆ ತಿಳಿಸಿದ್ದಾರೆ.
ಹಾಗೆಯೇ ಸಂಸ್ಥೆಯ ನೌಕರರ ಎಲ್ಲಾ ರೀತಿಯ ಸಮಸ್ಯೆಗಳ ಬಗ್ಗೆ ಸಚಿವರು ಮಾಹಿತಿ ಪಡೆದುಕೊಂಡಿದ್ದು, ಈ ಬಗ್ಗೆ ಸಚಿವರು ಸರ್ಕಾರದ ಜೊತೆ ಸಮಾಲೋಚನೆ ನಡೆಸಿ ಮುಂದಿನ ದಿನಗಳಲ್ಲಿ ನಿರ್ಧಾರಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಕೆಎಸ್ಆರ್ಟಿಸಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಷ್ಕರದ ಸಂದರ್ಭದಲ್ಲಿ ಅಮಾನತಾಗಿದ್ದ ಸಿಬ್ಬಂದಿಗಳು ತಮ್ಮನ್ನು ಮತ್ತೆ ಕರ್ತವ್ಯಕ್ಕೆ ತೆಗೆದುಕೊಳ್ಳುವಂತೆಯೂ ಸಚಿವರಿಗೆ ಮನವಿ ಮಾಡಿದ್ದರು. ಇದೀಗ ಸೇವೆಯಿಂದ ವಜಾಗೊಳಿಸಲಾದ ತರಬೇತುದಾರರ ವಿವರಗಳನ್ನು ಸಚಿವರು ಪಡೆದುಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.