ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಕಾಶ್ಮೀರಿ ಪಂಡಿತ ಯುವಕರ ನೆರವಿನೊಂದಿಗೆ, ರಾಜ್ಯದಲ್ಲಿ ನಿರ್ಲಕ್ಷ್ಯಕ್ಕೆ ತುತ್ತಾಗಿರುವ ದೇಗುಲಗಳು ಮತ್ತು ಧಾರ್ಮಿಕ ತಾಣಗಳನ್ನು ಜೀರ್ಣೋದ್ಧಾರ ಮತ್ತು ನವೀಕರಣಗೊಳಿಸುವ ನಿಟ್ಟಿನಲ್ಲಿ ಆರ್ಎಸ್ಎಸ್ನ ಅಂಗಸಂಸ್ಥೆ ಸಂಜೀವಿನಿ ಶಾರದಾ ಕೇಂದ್ರ ಕಾರ್ಯತತ್ಪರವಾಗಿವೆ.
ಈ ಬಗ್ಗೆ ಸಂಜೀವಿನಿ ಶಾರದಾ ಕೇಂದ್ರದ ಮುಖ್ಯಸ್ಥ ಕ್ರಿಸೇನ್ ಟಾಕ್ರೂ ಎಂಬವರು ಮಾತನಾಡಿದ್ದು, ಕೇಂದ್ರದ ಸದಸ್ಯರು ದೇವಾಲಯಗಳು, ಧಾರ್ಮಿಕ ತಾಣಗಳ ಪುನರುಜ್ಜೀವನ ಮತ್ತು ನವೀಕರಣಕ್ಕೆ ‘ಕಶ್ಯಪ ಭೂಮಿಗಾಗಿ ಯುವಜನ ಸೇವೆ’ ಎಂಬ ಆಂದೋಲನವನ್ನು ಆರಂಭಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಕಾಶ್ಮೀರದಲ್ಲಿ ನಿರ್ಲಕ್ಷ್ಯಕ್ಕೆ ತುತ್ತಾಗಿರುವ ದೇವಾಲಯಗಳು, ಕ್ಷೇತ್ರಗಳನ್ನು ಪುನರುಜ್ಜೀವನಗೊಳಿಸಿ, ಸಂರಕ್ಷಣೆ ಮಾಡಿ ಅವುಗಳ ನಿರ್ವಹಣೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಲಿದ್ದಾರೆ. ಹಾಗೆಯೇ ಕಾಶ್ಮೀರದಲ್ಲಿ ಧಾರ್ಮಿಕ ಪ್ರವಾಸಗಳನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಮತ್ತು ಪ್ರವಾಸಿಗರಿಗೆ ಸುರಕ್ಷಿತ ತಾಣಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಅವರ ವಾಸ್ತವ್ಯಕ್ಕೂ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.
ಈ ಆಂದೋಲನಕ್ಕೆ ಕೈಜೋಡಿಸಲು ಬಯಸುವವರನ್ನು ನೋಂದಣಿ ಮಾಡಿಕೊಳ್ಳುವುದಕ್ಕೂ ಕೇಂದ್ರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.