ಬೆಂಗಳೂರು: ಸುಪ್ರೀಂಕೋರ್ಟ್ ಆದೇಶದನ್ವಯ ರಾಜ್ಯದ ಹಲವಾರು ದೇಗುಲಗಳ ನೆಲಸಮ ಮಾಡುವ ವಿಚಾರದಲ್ಲಿ ಉಂಟಾಗಿರುವ ಗೊಂದಲ, ವಿರೋಧದ ಹಿನ್ನೆಲೆಯಲ್ಲಿ, ಯಾವುದೇ ರೀತಿಯ ನೊಟೀಸ್ ನೀಡದೆ ಧಾರ್ಮಿಕ ಕೇಂದ್ರಗಳನ್ನು ನೆಲಸಮ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಇಂತಹ ನಿಲುವನ್ನು ಏಕಾಏಕಿ ಅನುಷ್ಠಾನ ಮಾಡುವುದು ಸರಿಯಲ್ಲ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆಗೂ ಮಾತನಾಡಲಾಗಿದೆ. ದೇಗುಲಗಳನ್ನು ನೆಲಸಮ ಮಾಡುವ ಮೊದಲು ಅಲ್ಲಿನ ಸ್ಥಳೀಯ ಜನರ ಜೊತೆ ಮಾತುಕತೆ ನಡೆಸಿ, ಬದಲಿ ಜಾಗಗಳನ್ನು ತೋರಿಸಿ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಅಧಿಕಾರಿಗಳು ಪ್ರಯತ್ನ ನಡೆಸಬೇಕಾಗಿತ್ತು ಎಂದು ಅವರು ಹೇಳಿದ್ದಾರೆ.
ಈ ವಿಚಾರ ಕೇವಲ ಮೈಸೂರಿಗೆ ಮಾತ್ರವೇ ಸಂಬಂಧಿಸಿದ್ದಲ್ಲ. ಇಡೀ ರಾಜ್ಯಕ್ಕೆ ಸಂಬಂಧಪಟ್ಟ ವಿಚಾರ. 12 ವರ್ಷಗಳ ಹಿಂದಿನ ಸುಪ್ರೀಂಕೋರ್ಟ್ ಆದೇಶದಲ್ಲಿ ದೇವಾಲಯಗಳ ಜೊತೆಗೆ ಮಸೀದಿ, ಚರ್ಚುಗಳೂ ಇವೆ. ಈ ಬಗ್ಗೆ ಸರ್ಕಾರ ಸದ್ಯದಲ್ಲೇ ನಿಲುವು ಪ್ರಕಟಿಸಲಿದ್ದು, ಜನರ ಭಾವನೆ ಮತ್ತು ಸುಪ್ರೀಂಕೋರ್ಟ್ ಆದೇಶದ ನಡುವೆ ಅಧಿಕಾರಿಗಳು ಸಂಯಮದಿಂದ ವರ್ತಿಸಬೇಕು ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.