ಬೆಂಗಳೂರು : ನಗರದಲ್ಲಿ ಹೆಚ್ಚುತ್ತಿರುವ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಉದ್ಯಾನ ನಗರಿಯಲ್ಲಿ ಮತ್ತೇ ಹಚ್ಚ ಹಸಿರಿನ ಗತ ವೈಭವ ನಿರ್ಮಾಣವಾಗಬೇಕು. ಈ ನಿಟ್ಟಿನಲ್ಲಿ ನಗರದಾದ್ಯಂತ ಒಂದು ಲಕ್ಷ ಇಪ್ಪತ್ತು ಸಾವಿರ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಅರಣ್ಯ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಉಮೇಶ ವಿ. ಕತ್ತಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಂದರ್ಭದಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ಒಂದು ವೈಶಿಷ್ಟ್ಯತೆಯನ್ನು ಪಾಲನೆ ಮಾಡುವಂತೆ ಸಚಿವರು ತಿಳಿಸಿದ್ದಾರೆ. ಶೇ. 10 ರಷ್ಟು ಹಣ್ಣಿನ ಮರಗಳನ್ನ ನೆಡುವ ಕಾರ್ಯವಾಗಬೇಕು, ಇವು ವಿದ್ಯಾರ್ಥಿಗಳಿಗೆ ವಿವಿಧ ಹಣ್ಣಿನ ಮರಗಳ ಕುರಿತು ಮಾಹಿತಿ ನೀಡುವ ನಿಟ್ಟಿನಲ್ಲಿ ನೆರವಾಗಬೇಕು ಎಂದು ಸೂಚಿಸಿದ್ದಾರೆ. ಇಂದಿನ ಪೀಳಿಗೆಯ ಮಕ್ಕಳಿಗೆ ವಿವಿಧ ಹಣ್ಣಿನ ಮರಗಳ ಬಗ್ಗೆ ಸ್ಪಷ್ಟ ಮಾಹಿತಿಯೇ ಇಲ್ಲ. ಹೀಗಾಗಿ ಇವುಗಳು ಮಕ್ಕಳಲ್ಲಿ ಆ ಕುರಿತು ಜಾಗೃತಿ ಮೂಡಿಸಲು ನೆರವಾಗಬೇಕು ಮತ್ತು ಪಕ್ಷಿಗಳಿಗೂ ಆಹಾರ ದೊರಕುವಂತಾಗಬೇಕು ಎಂದರು.
ಇದೇ ವೇಳೆ ಅರಣ್ಯ ಇಲಾಖೆಯಿಂದ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಹಲವು ಕಾರ್ಯಗಳ ಕುರಿತಂತೆ ಸುದೀರ್ಘವಾಗಿ ಚರ್ಚಿಸಿದರು. ಹಾಗೆಯೇ ಅರಣ್ಯ ಇಲಾಖೆಯು ಇನ್ನು ಮುಂದೆ ರೈತರಿಗೆ ಹೆಚ್ಚಿನ ಬೇಡಿಕೆ ಇರುವ ಸಸಿಗಳ ಉತ್ಪಾದನೆ ಮಾಡುವ ನಿಟ್ಟಿನಲ್ಲಿ ಯೋಚಿಸಬೇಕು ಎಂದು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.