ನವದೆಹಲಿ: ದೇಶದಲ್ಲಿ ವಾಹನ ತಯಾರಕರು ಕೊರೋನಾ ಹೊಡೆತಕ್ಕೆ ನಲುಗಿದ್ದು, ಅವರಿಗೆ ಅನುಕೂಲ ಒದಗಿಸಿಕೊಡುವ ನಿಟ್ಟಿನಲ್ಲಿ ಪ್ರೋತ್ಸಾಹ ಧನವನ್ನು ನೀಡಲು ಕೇಂದ್ರ ಸರ್ಕಾರ ಸಂಪುಟ ಸಭೆಯಲ್ಲಿ ನಿರ್ಧರಿಸಿದೆ.
ಉತ್ಪಾದನೆ ಆಧರಿತ ಉತ್ತೇಜನ (ಪ್ರೋತ್ಸಾಹ) ಧನ ಯೋಜನೆ -ಪಿಎಲ್ಐ ಅಡಿಯಲ್ಲಿ 26,058 ಕೋಟಿ ರೂ. ಗಳನ್ನು ಅಟೋಮೊಬೈಲ್, ಡ್ರೋಣ್ ತಯಾರಿಕಾ ಕ್ಷೇತ್ರಕ್ಕೆ ನೀಡಲು ಕೇಂದ್ರ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಕಂಪೆನಿಗಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ಈ ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ. ಅಟೋಮೊಬೈಲ್ ಬಿಡಿಭಾಗಗಳ ಉತ್ಪಾದನೆಗೂ ಈ ಯೋಜನೆ ನೆರವಾಗಲಿದೆ. ಈ ಕ್ರಮದಿಂದ ಈ ಕ್ಷೇತ್ರದಲ್ಲಿ 42,500 ಕೋಟಿ ರೂ. ಹೆಚ್ಚುವರಿ ಬಂಡವಾಳ ಉತ್ಪಾದನೆಯಾಗುವ ನಿರೀಕ್ಷೆಯೂ ಸರ್ಕಾರಕ್ಕಿದೆ.
ಈ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಾತನಾಡಿದ್ದು, ಮುಂದಿನ ಐದು ವರ್ಷಗಳಿಗೆ ಸಂಬಂಧಿಸಿದಂತೆ ಅಟೋಮೊಬೈಲ್ ಕ್ಷೇತ್ರದಲ್ಲಿ ದೇಶಾದ್ಯಂತ ಸುಮಾರು 7.5 ಲಕ್ಷ ಉದ್ಯೋಗ ಸೃಷ್ಟಿಯಾಗುವ ಭರವಸೆ ಇದೆ. ಒಟ್ಟಾರೆಯಾಗಿ ಅಟೋಮೊಬೈಲ್ ಕ್ಷೇತ್ರದ 13 ವಲಯಗಳಿಗೆ ಸಂಬಂಧಿಸಿದಂತೆ ಈ ಯೋಜನೆಯ ಮುಖೇನ ಹಣಕಾಸು ನೆರವು ದೊರೆಯಲಿದೆ ಎಂದು ತಿಳಿಸಿದ್ದಾರೆ. ಬ್ಯಾಟರಿ ಚಾಲಿತ ವಾಹನಗಳು, ಎಲೆಕ್ಟ್ರಿಕ್ ವಾಹನಗಳು, ಹೈಡ್ರೋಜನ್ ಬಳಸುವ ವಾಹನಗಳ ತಯಾರಿಕೆಗೆ ಇದರಿಂದ ಉತ್ತೇಜನ ದೊರೆಯಲಿದೆ. ದ್ವಿಚಕ್ರ, ಸಾರ್ವಜನಿಕ ಸಾರಿಗೆ, ಟ್ರಾಕ್ಟರ್ಗಳ ಉತ್ಪಾದನೆಗೆ ಈ ಮೂಲಕ ಆದ್ಯತೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ಈಗಾಗಲೇ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ತಯಾರಿಕೆಯ ಉತ್ತೇಜನಕ್ಕೆ ಸರ್ಕಾರ ಪಿಎಲ್ಐ ಅಡಿಯಲ್ಲಿ 10 ಸಾವಿರ ಕೋಟಿ ರೂ. ಮೀಸಲಿಟ್ಟಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.