ಮೈಸೂರು: ಈ ಬಾರಿಯ ದಸರಾ ಉತ್ಸವದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಮೈಸೂರು ಅರಮನೆಯ ಅಂಗಳಕ್ಕೆ ಆಗಮಿಸಿದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಗೆ ಜಿಲ್ಲಾಡಳಿತದ ವತಿಯಿಂದ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು.
ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಗಜಪಡೆಯು ಕೆಲ ದಿನಗಳ ಹಿಂದಷ್ಟೇ ಕಾಡಿನಿಂದ ಮೈಸೂರಿನ ಅರಣ್ಯ ಭವನಕ್ಕೆ ಬಂದು ಬೀಡು ಬಿಟ್ಟಿದ್ದವು. ಈ ಆನೆಗಳನ್ನು ಇಂದು ಅರಮನೆಗೆ ಕರೆತರಲಾಗಿದ್ದು, ಅಂಬಾವಿಲಾಸ ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಪುಷ್ಪಾರ್ಚನೆ ಮೂಲಕ ಸ್ವಾಗತಿಸಲಾಯಿತು.
ಅರಮನೆಯ ಆಡಳಿತ ಗಜಪಡೆಯನ್ನು ವಾದ್ಯಮೇಳಗಳ ಮೂಲಕ ಬರಮಾಡಿಕೊಂಡರು. ಕಬ್ಬು, ಬೆಲ್ಲ, ತೆಂಗಿನಕಾಯಿಗಳನ್ನು ಆನೆಗಳಿಗೆ ನೀಡಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.