ನವದೆಹಲಿ: ದೇಶದ ಜನರ ಆರ್ಥಿಕತೆಗೆ ಸಂಬಂಧಿಸಿದಂತೆ ಜನ್ ಧನ್, ಆಧಾರ್ ಮತ್ತು ಮೊಬೈಲ್ ಪ್ರಮುಖ ಪಾತ್ರ ವಹಿಸಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅವರು ಔರಂಗಾಬಾದ್ನಲ್ಲಿ ನಡೆಯುತ್ತಿರುವ ಒಂದು ದಿನದ ರಾಷ್ಟ್ರೀಯ ಬ್ಯಾಂಕ್ ಪರಿಷತ್ನ ಮಂಥನ್ ಉದ್ಘಾಟನಾ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿ ಮಾತನಾಡಿದರು. ಜನ್ ಧನ್, ಆಧಾರ್, ಮೊಬೈಲ್ ಈ ಮೂರು ಅಂಶಗಳು ಭಾರತದಂತಹ ದೇಶದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿದೆ. ದೇಶವು ನಿರ್ಧಿಷ್ಟ ನಮೂನೆಯಲ್ಲಿ ಆರ್ಥಿಕ ಗುರಿ ಸಾಧಿಸುವುದಕ್ಕೆ ಈ ಅಂಶಗಳು ಪೂರಕವಾಗಿವೆ ಎಂದು ಅವರು ಹೇಳಿದ್ದಾರೆ.
ದೇಶದ ಆರ್ಥಿಕ ಭವಿಷ್ಯದ ದೃಷ್ಟಿಯಿಂದಲೂ ಈ ಅಂಶ ಸಕಾರಾತ್ಮಕ ಪರಿಣಾಮ ಬೀರುತ್ತವೆ. ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮತ್ತು ಸಬ್ಕಾ ವಿಶ್ವಾಸ್ ತತ್ವವನ್ನು ತಲುಪಲು ಈ ಮೂರು ವಿಚಾರಗಳು ಸರ್ಕಾರಕ್ಕೆ ಅನುಕೂಲ ಕಲ್ಪಿಸಿದೆ. ಜನ್ ಧನ್ ಮೂಲಕ ದೇಶದ ಎಲ್ಲಾ ಜನರನ್ನು ಬ್ಯಾಂಕ್ಗಳತ್ತ ಬರುವಂತೆ ಮಾಡುವ ಕೆಲಸವನ್ನು ಪ್ರಧಾನಿ ಮೋದಿ ಅವರು ಮಾಡಿದ್ದಾರೆ. ಈ ಸಲುವಾಗಿ ಅವರು ದೇಶದ ಜನರ ಆತ್ಮವಿಶ್ವಾಸ ಹೆಚ್ಚಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿಯೂ ಸರ್ಕಾರದ ಯೋಜನೆಗಳು ಸಾಮಾನ್ಯ ಜನರನ್ನು ಸರಿಯಾಗಿ ತಲುಪಲು ಈ ಅಂಶಗಳು ನೆರವಾಗಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.