ಲಕ್ನೋ: ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರವು 5000 ಮದರಸಗಳನ್ನು ಮುಚ್ಚಿದೆ. ಮದರಸಾಗಳು ಅನೇಕ ನಿಯಮಗಳನ್ನು ಉಲ್ಲಂಘಿಸುತ್ತಿವೆ ಮತ್ತು ಬಹು ಅಕ್ರಮಗಳಲ್ಲಿ ಭಾಗಿಯಾಗಿವೆ ಎಂದು ತನಿಖೆಯಲ್ಲಿ ಬಹಿರಂಗವಾದ ನಂತರ ಮದರಸಾಗಳನ್ನು ಮುಚ್ಚಲು ನಿರ್ಧರಿಸಲಾಗಿದೆ.
ವಿವರವಾದ ವಿಚಾರಣೆಯ ನಂತರ ಸಂಬಂಧಿತ ಮದರಸಾಗಳು ಅನೇಕ ನಿಯಮಗಳನ್ನು ಉಲ್ಲಂಘಿಸುತ್ತಿವೆ ಎಂದು ತಿಳಿದುಬಂದಿದೆ.
ಉತ್ತರ ಪ್ರದೇಶ ಅಲ್ಪಸಂಖ್ಯಾತ ಆಯೋಗದ ಸದಸ್ಯ ಸುರೇಶ್ ಜೈನ್ ಈ ಬಗ್ಗೆ ಮಾಹಿತಿ ನೀಡಿದ್ದು, ಹಲವು ಮದರಸಾಗಳು ಉತ್ತರ ಪ್ರದೇಶ ಮದ್ರಸಾ ಶಿಕ್ಷಣ ಮಂಡಳಿಯ ಪೋರ್ಟಲ್ನಲ್ಲಿ ಡೇಟಾವನ್ನು ಅಪ್ಲೋಡ್ ಮಾಡುತ್ತಿಲ್ಲ. ಮದರಸಾಗಳಿಗೆ ಡೇಟಾ ಅಪ್ಲೋಡ್ ಮಾಡುವುದು ಕಡ್ಡಾಯವಾಗಿದೆ ಎಂದಿದ್ದಾರೆ.
ಅಕ್ರಮ ಮದರಸಾಗಳನ್ನು ಮುಚ್ಚುವ ಮೂಲಕ ಸರ್ಕಾರವು 100 ಕೋಟಿಗೂ ಹೆಚ್ಚು ಹಣವನ್ನು ಉಳಿಸುತ್ತದೆ ಎಂದು ಅವರು ಹೇಳಿದ್ದಾರೆ. ಜೈನ ಮತ್ತು ಸಿಖ್ ಸಮುದಾಯ ಸಂಸ್ಥೆಗಳ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡುತ್ತದೆ ಎಂದಿದ್ದಾರೆ.
ಉತ್ತರಪ್ರದೇಶದ ಅಜಮ್ಗಢ ಮತ್ತು ಮಿರ್ಜಾಪುರದಲ್ಲಿ ನಕಲಿ ಮದ್ರಸಾ ಪ್ರಕರಣಗಳ ತನಿಖೆ ನಡೆಸುತ್ತಿರುವ ಎಸ್ಐಟಿ 21 ನಕಲಿ ಸಂಸ್ಥೆಗಳನ್ನು ನಡೆಸಿದ್ದಕ್ಕಾಗಿ ಮತ್ತು ಸರ್ಕಾರದಿಂದ ಕೋಟಿಗಟ್ಟಲೆ ಅನುದಾನವನ್ನು ಪಡೆದಿದ್ದಕ್ಕಾಗಿ ಎಫ್ಐಆರ್ ದಾಖಲಿಸಿದೆ ಎಂದು ವರದಿ ಆಗಿತ್ತು.
2009-10 ರಲ್ಲಿ ಬಿಎಸ್ಪಿಯ ಮಾಯಾವತಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ ಅನೇಕ ಮದ್ರಸಾಗಳನ್ನು ಭ ಪರಿಶೀಲನೆಯಿಲ್ಲದೆ ಅನುಮೋದಿಸಲಾಯಿತು. ರಾಜ್ಯದ ಅಜಮ್ಗಢ ಮತ್ತು ಮಿರ್ಜಾಪುರ ಜಿಲ್ಲೆಗಳಲ್ಲಿನ ಮದರಸಾಗಳು ಕೇವಲ ಕಾಗದದಲ್ಲಿ ಮಾತ್ರ ಅಸ್ತಿತ್ವದಲ್ಲಿದ್ದವು.
ಸಿಎಂ ಯೋಗಿ ಈ ಪ್ರಕರಣದಲ್ಲಿ ಎಸ್ಐಟಿ ತನಿಖೆಗೆ ಆದೇಶಿಸಿದ್ದಾರೆ. ಅಜಮ್ಗಢದಲ್ಲಿ 250 ಮತ್ತು ಮಿರ್ಜಾಪುರದಲ್ಲಿ 143 ಮದರಸಾಗಳನ್ನು ತನಿಖೆ ಮಾಡಲಾಗಿದೆ.
2017 ರಲ್ಲಿ ಹಗರಣ ಬೆಳಕಿಗೆ ಬಂದ ನಂತರ, ಯೋಗಿ ಸರ್ಕಾರವು ಈ ಮದರಸಾಗಳಿಗೆ ಅನುದಾನವನ್ನು ನಿಲ್ಲಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.