ಮಂಗಳೂರು: ದೇವಾಲಯಗಳ ನೆಲಸಮ ವಿಷಯವು ಟೂಲ್ಕಿಟ್ ಸಂಚಿನ ಭಾಗವಾಗಿದೆ ಎಂಬ ಸಂಶಯ ಮೂಡುತ್ತಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್ ಅವರು ಆರೋಪಿಸಿದ್ದಾರೆ.
ಈ ಸಂಬಂಧ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದೆ. ಈ ಸಂದರ್ಭದಲ್ಲಿ ಬಹುಸಂಖ್ಯಾತರ ಭಾವನೆಗಳಿಗೆ ಧಕ್ಕೆ ಮಾಡುವುದಕ್ಕಾಗಿ ಮಾಡಲಾದ ವ್ಯವಸ್ಥಿತ ಸಂಚಿನ ಭಾಗ ಇದಾಗಿದೆ ಎಂಬ ಸಂಶಯ ಮೂಡುತ್ತದೆ. ಈ ಬಗ್ಗೆ ಸರ್ಕಾರದ ಪರವಾಗಿ ಏನು ಕ್ರಮ ಕೈಗೊಳ್ಳಬೇಕೋ, ಅದನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
2009 ರ ಬಳಿಕ ನಿರ್ಮಾಣವಾದ ದೇವಾಲಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಬೇರೆ ವ್ಯವಸ್ಥೆ ಕಲ್ಪಿಸಿ ಬಳಿಕ ನಿರ್ಣಯಗಳನ್ನು ಕೈಗೊಳ್ಳಬೇಕು ಎಂದು ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಎಲ್ಲಿಯೂ ದೇಗುಲಗಳನ್ನು ಕೆಡವಲು ಆದೇಶ ನೀಡಿಲ್ಲ. ಸ್ಪಷ್ಟ ದಾಖಲೆಗಳನ್ನು ಹೊಂದಿರುವ ದೇವಾಲಯಗಳನ್ನು ಈ ಪಟ್ಟಿಯಲ್ಲಿ ಸೇರಿಸಿಕೊಳ್ಳುವ ಅಗತ್ಯತೆ ಇರಲಿಲ್ಲ. ಇದು ಷಡ್ಯಂತ್ರದ ಭಾಗವೇನೋ ಎಂಬ ಸಂದೇಹ ಮೂಡುತ್ತಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.