ಬೆಂಗಳೂರು: ವಿಶ್ವದ ಜನಪ್ರಿಯ ನಾಯಕ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಇಂದಿನಿಂದ ಅಕ್ಟೋಬರ್ 7 ರವರೆಗೆ ಸೇವೆ ಮತ್ತು ಸಮರ್ಪಣೆ ಅಭಿಯಾನ ನಡೆಯಲಿದ್ದು, ರಾಜ್ಯದಲ್ಲೂ ಆಸ್ಪತ್ರೆಗಳಲ್ಲಿ ಹಣ್ಣು ವಿತರಣೆ, ರಕ್ತದಾನ ಶಿಬಿರಗಳನ್ನು ಸಂಘಟಿಸಲಾಗುತ್ತಿದೆ. ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಏರ್ಪಡಿಸಲಾಗುತ್ತದೆ. ಅಲ್ಲದೆ, ನದಿಗಳ ಪ್ಲಾಸ್ಟಿಕ್ ಹೆಕ್ಕುವ ಕಾರ್ಯವನ್ನೂ ನಡೆಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ತಿಳಿಸಿದರು.
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಿನ್ನೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕೋವಿಡ್ ಲಸಿಕೆ ಎಲ್ಲರಿಗೂ ತಲುಪುವಂತೆ ನೋಡಿಕೊಳ್ಳಲಾಗುವುದು. ಬಡಜನರಿಗೆ ನೆರವಾಗುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಪ್ರಧಾನಿಯವರ ವ್ಯಕ್ತಿತ್ವದ ಕುರಿತು ಜನರಿಗೆ ತಿಳಿಸಲು ಪ್ರದರ್ಶಿನಿಗಳನ್ನು ಏರ್ಪಡಿಸಲಾಗುತ್ತದೆ ಎಂದು ವಿವರಿಸಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 30ರಿಂದ 40 ವರ್ಷಗಳ ಕಾಲ ಪಕ್ಷವನ್ನು ಕಟ್ಟಿದ ಹಿರಿಯ ನಾಯಕರಾಗಿದ್ದು, ಅವರ ರಾಜ್ಯ ಪ್ರವಾಸಕ್ಕೆ ಪಕ್ಷದ ಅನುಮತಿ ಬೇಕಿಲ್ಲ ಎಂದು ಅವರು ಈ ಕುರಿತ ಪ್ರಶ್ನೆಗೆ ಉತ್ತರ ನೀಡಿದರು. ಸಚಿವೆ ಶಶಿಕಲಾ ಜೊಲ್ಲೆ ಅವರ ರಾಜೀನಾಮೆಗೆ ಕಾಂಗ್ರೆಸ್ಸಿಗರು ಒತ್ತಾಯಿಸುತ್ತಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ವಿಚಾರಹೀನವಾಗಿದೆ. ಯಾವುದೇ ವಿಷಯಗಳಿಲ್ಲದೆ ಇದ್ದರೂ, ಏನಾದರೂ ಮಾತನಾಡುವ ಪಕ್ಷದ ಮುಖಂಡರು ಅಲ್ಲಿದ್ದಾರೆ. ಆದ್ದರಿಂದ ಕಾಂಗ್ರೆಸ್ ಪಕ್ಷವನ್ನು ನಾವು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.