ಬೆಂಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಪೋಷಕರು ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯದ ಖಾಸಗಿ ಶಾಲಾ ಶುಲ್ಕವನ್ನು 15% ಗಳಷ್ಟು ಕಡಿತಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಖಾಸಗಿ ಶಾಲಾ ಶುಲ್ಕ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ತೀರ್ಮಾನ ಪ್ರಶ್ನಿಸಿ, ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳು ಸಲ್ಲಿಕೆ ಮಾಡಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಈ ಸಂಬಂಧ ಸುಪ್ರೀಂಕೋರ್ಟ್ ಆದೇಶವನ್ನು ಉಲ್ಲೇಖಿಸಿ 15% ಶುಲ್ಕ ಕಡಿತ ಮಾಡುವಂತೆ ಆದೇಶಿಸಿದೆ.
ಹಾಗೆಯೇ ಖಾಸಗಿ ಶಾಲೆಗಳ ಶುಲ್ಕ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ನಿರ್ಣಯ ಕೈಗೊಳ್ಳಬಾರದು ಎಂದು ಹೇಳಿದೆ. ಸರ್ಕಾರ ಹೊರಡಿಸಿದ್ದ ಆದೇಶದಿಂದ ಸಿಬ್ಬಂದಿಗಳ ವೇತನ, ಶಾಲೆಗಳ ಸಮರ್ಪಕ ನಿರ್ವಹಣೆ ಕಷ್ಟವಾಗುತ್ತಿದೆ. ಈ ನಿಟ್ಟಿನಲ್ಲಿ ಖಾಸಗಿ ಶಾಲೆಗಳು ಹೈಕೋರ್ಟ್ ಮೊರೆ ಹೋಗಿದ್ದವು.
ಇನ್ನು ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಲಿಪಿಯ ಪಠ್ಯ ಪುಸ್ತಕಗಳನ್ನು 15 ದಿನಗಳಲ್ಲಿ ವಿತರಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತಿಳಿಸಿದೆ. ಪ್ರಸಕ್ತ ಸಾಲಿನಿಂದ ಪಠ್ಯ ಪುಸ್ತಕಗಳನ್ನು ವಿತರಿಸಲಾಗುವುದು ಎಂದು ಈ ಹಿಂದೆ ನೀಡಿದ್ದ ಭರವಸೆಯನ್ನು ಉಲ್ಲೇಖಿಸಿ ಈ ಆದೇಶವನ್ನು ಹೊರಡಿಸಿದೆ.
ಈ ಸಂಬಂಧ ರಾಷ್ಟ್ರೀಯ ಅಂಧರ ಒಕ್ಕೂಟ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕೋರ್ಟ್ ಪರಿಶೀಲಿಸಿದ್ದು, ಈ ಆದೇಶವನ್ನು ಹೊರಡಿಸಿದೆ. ಈ ಆದೇಶದನ್ವಯ ಅಂಧ ವಿದ್ಯಾರ್ಥಿಗಳಿಗೆ ಸರ್ಕಾರ ಬ್ರೈಲ್ ಲಿಪಿಯಲ್ಲಿಯೇ ಪಠ್ಯ ಪುಸ್ತಕಗಳನ್ನು ಉಚಿತವಾಗಿ ವಿತರಿಸಬೇಕು ಎಂದು ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.