ಲಕ್ನೋ: ಬಿಜೆಪಿ ಜಾತಿ ರಾಜಕಾರಣ ಮಾಡುವುದಿಲ್ಲ, ಅದು ಸಮಾಜದಲ್ಲಿ ಸಾಮಾಜಿಕ ಸಾಮರಸ್ಯದ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ ಹೇಳಿದ್ದಾರೆ.
“ನಮ್ಮ ಪಕ್ಷವು ಹಿಂದುಳಿದ ಜಾತಿಗಳ ಜನರ ಜೀವನದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.
ವಾರಾಣಸಿಯಲ್ಲಿ ನಡೆದ ಪರಿಶಿಷ್ಟ ಜಾತಿ ಮೋರ್ಚಾದ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಮಾರೋಪದಲ್ಲಿ ಆದಿತ್ಯನಾಥ್ ಮಾತನಾಡುತ್ತಿದ್ದರು.
ಹಿಂದುಳಿದವರ ಕಲ್ಯಾಣಕ್ಕಾಗಿ ಬಿಜೆಪಿ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಅವರು ಹೇಳಿದ ಅವರು, ಹಿಂದುಳಿದ ವರ್ಗಗಳಿಗೆ ಸಹಾಯ ಮಾಡುವಲ್ಲಿ ನಿಷ್ಕ್ರಿಯವಾಗಿದ್ದ ವಿರೋಧ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
“ಬಿಜೆಪಿ ಜಾತಿ ರಾಜಕಾರಣ ಮಾಡುವುದಿಲ್ಲ. ಸಮಾಜಕ್ಕೆ ಸಾಮಾಜಿಕ ಸಾಮರಸ್ಯವನ್ನು ತರಲು ಬಿಜೆಪಿ ಕೆಲಸ ಮಾಡಿದೆ. ಬಿಜೆಪಿಗಿಂತ ಮುಂಚಿನ ಸರ್ಕಾರಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಕ್ಕೆ ಏನೂ ಮಾಡಿಲ್ಲ” ಎಂದು ಯುಪಿ ಸಿಎಂ ಹೇಳಿದ್ದಾರೆ.
ಬಾಬಾಸಾಹೇಬ್ ಅಂಬೇಡ್ಕರ್ ಅವರ ಕನಸುಗಳನ್ನು ಸಾಕಾರಗೊಳಿಸುವುದಕ್ಕಾಗಿ ಬಿಜೆಪಿ ಸರ್ಕಾರವು ಅನೇಕ ಸಾರ್ವಜನಿಕ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಿದೆ. ಈ ಯೋಜನೆಗಳು ಹಿಂದುಳಿದವರ ಜೀವನಮಟ್ಟದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ “ಎಂದು ಆದಿತ್ಯನಾಥ್ ಹೇಳಿದ್ದಾರೆ.
ಸ್ವಚ್ಚ ಭಾರತ್ ಮಿಷನ್ ದೇಶದ ಜನರ ಜೀವನವನ್ನು ಸುಧಾರಿಸಿದೆ ಎಂದು ಪ್ರತಿಪಾದಿಸಿದ ಅವರು, ಹಿಂದಿನ ಸರ್ಕಾರಗಳು ದಲಿತರಿಗಾಗಿ, ಸ್ವಚ್ಛತೆಯ ನಿಟ್ಟಿನಲ್ಲಿ ಏನೂ ಮಾಡಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಸ್ವಚ್ಛ ಭಾರತ ಮಿಷನ್ನಿಂದಾಗಿ ದೇಶದ 10 ಕೋಟಿ ಜನರ ಮನೆಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಯಿತು. ಜಗತ್ತಿನಲ್ಲಿ ಭಾರತ ಬದಲಾಗಿದೆ. ಈ ಕಾರಣದಿಂದಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಜಾತಿಗಳಿಗೆ ಸೇರಿದ ಶೇ. 95 ರಷ್ಟು ಜನರು ಪ್ರಯೋಜನ ಪಡೆದಿದ್ದಾರೆ. ಉತ್ತರ ಪ್ರದೇಶದಲ್ಲಿ 2,61 ಕೋಟಿ ಜನರು ಶೌಚಾಲಯ ಸೌಲಭ್ಯಗಳನ್ನು ಪಡೆದುಕೊಂಡಿದ್ದಾರೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.