ನವದೆಹಲಿ: ಮುಂದಿನ ವರ್ಷದ ಫೆಬ್ರವರಿಯಲ್ಲಿ ಹೈದರಾಬಾದ್ನಲ್ಲಿ ‘ಸಮಾನತೆಯ ಪ್ರತಿಮೆ’ ಎಂದು ಹೆಸರಿಸಲಾದ ಶ್ರೀ ರಾಮಾನುಜಾಚಾರ್ಯರ ಪ್ರತಿಮೆ ಅನಾವರಣಗೊಳ್ಳಲಿದೆ.
216 ಅಡಿ ಎತ್ತರದ ಶ್ರೀ ರಾಮಾನುಜಾಚಾರ್ಯರ ಭವ್ಯ ಪ್ರತಿಮೆಯನ್ನು ಹೈದರಾಬಾದ್ ಸಮೀಪದ 38 ಎಕರೆ ಕ್ಯಾಂಪಸ್ನಲ್ಲಿ ಪ್ರತಿಷ್ಠಾಪಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಆಶ್ರಮದ ಮುಖ್ಯಸ್ಥ ಪೂಜ್ಯ ಚಿನ್ನ ಜೀಯರ್ ಸ್ವಾಮಿ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣ ನೀಡಿದ್ದರು.
ಸಂತ ಶ್ರೀ ರಾಮಾನುಜಾಚಾರ್ಯರ ಭವ್ಯ ಪ್ರತಿಮೆಯನ್ನು ಸಮಾನತೆಯ ಪ್ರತಿಮೆ ಎಂದು ಹೆಸರಿಸಲಾಗಿದೆ.
ವೈಷ್ಣವ ಪಂಥದ ಮುಂದಾಳು ಮತ್ತು ಭಕ್ತಿ ಚಳುವಳಿಯ ರೂವಾರಿ ಶ್ರೀ ರಾಮಾನುಜಾಚಾರ್ಯರು 1017 ರಲ್ಲಿ ತಮಿಳುನಾಡಿನ ಶ್ರೀ ಪೆರುಂಬದೂರಿನಲ್ಲಿ ಜನಿಸಿದರು. ಅವರು ವೇದಗಳ ಸಾರವನ್ನು ಒಂಬತ್ತು ಗ್ರಂಥಗಳ ರೂಪದಲ್ಲಿ ಪ್ರಸ್ತುತಪಡಿಸಿದರು.
ಅವರು ಸಮಾಜದ ಎಲ್ಲ ವರ್ಗಗಳ ಭಾರತೀಯ ಜೀವನ ವಿಧಾನವನ್ನು ಅರ್ಥಮಾಡಿಕೊಳ್ಳಲು ದೇಶಾದ್ಯಂತ ಸಂಚರಿಸಿದರು. ಜೀವನದುದ್ದಕ್ಕೂ ಶ್ರೀ ರಾಮಾನುಜಾಚಾರ್ಯರು ಸಮಾಜದಲ್ಲಿನ ಎಲ್ಲಾ ರೀತಿಯ ಅಸಮಾನತೆಯ ವಿರುದ್ಧ ಹೋರಾಡಿದರು. ಅವರು ಜಾತಿ ಮತ್ತು ಲಿಂಗದ ಆಧಾರದ ಮೇಲೆ ಎಲ್ಲಾ ರೀತಿಯ ತಾರತಮ್ಯವನ್ನು ವಿರೋಧಿಸಿದರು.
ಕಾರ್ಯಕ್ರಮದಲ್ಲಿ ಶ್ರೀ ರಾಮಾನುಜಾಚಾರ್ಯರ ಚಿನ್ನದ ಮೂರ್ತಿಯನ್ನೂ ಪ್ರತಿಷ್ಠಾಪಿಸಲಾಗುವುದು. ಆವರಣವು ಶ್ರೀ ರಾಮಾನುಜಾಚಾರ್ಯರ ಜೀವನ ಚರಿತ್ರೆಯನ್ನು ಪ್ರದರ್ಶಿಸಲಿದೆ. ಪ್ರತಿಮೆ ಮತ್ತು ಆವರಣದ ನಿರ್ಮಾಣವನ್ನು 2014 ರಲ್ಲಿ ಪೂಜ್ಯ ಚಿನ್ನ ಜೀಯರ್ ಸ್ವಾಮಿಜೀ ಕಲ್ಪಿಸಿದ್ದರು. ಇದರ ಅಂದಾಜು ವೆಚ್ಚ 1000 ಕೋಟಿ ರೂಪಾಯಿಗಳಿಗಿಂತಲೂ ಹೆಚ್ಚಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.