ಬೆಂಗಳೂರು: ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಸೇವೆಗಳನ್ನು ಮೇಲ್ದರ್ಜೆಗೇರಿಸುವುದು, ಕೊರೋನಾ ಲಸಿಕೀಕರಣ, ಆಕ್ಸಿಜನ್ ಸಂಗ್ರಹಣಾ ಘಟಕಗಳ ನಿರ್ಮಾಣ ಕಾರ್ಯ ಸೇರಿದಂತೆ ಇನ್ನಿತರ ವೈದ್ಯಕೀಯ ಕ್ಷೇತ್ರದಲ್ಲಿನ ಮೂಲಸೌಕರ್ಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಚಿವ ಡಾ. ಕೆ. ಸುಧಾಕರ್ ಅವರು ಇಂದು ಸದನದಲ್ಲಿ ಮಾಹಿತಿ ನೀಡಿದರು.
ರಾಜ್ಯದಲ್ಲಿ ವೈದ್ಯಕೀಯ ಮೂಲಸೌಕರ್ಯಗಳ ವಿಸ್ತರಣೆ, ಸುಧಾರಣೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ ಹಲವಾಉ ಸುಧಾರಣಾ ಕೆಲಸಗಳನ್ನು ಕೊರೋನಾ ಸಂದರ್ಭದಲ್ಲಿಯೂ ನಡೆಸಲಾಗಿದೆ. ರಾಜ್ಯದಲ್ಲಿ ಆಕ್ಸಿಜನ್ ಘಟಕಗಳನ್ನು ಹೆಚ್ಚಿಸುವ ಮೂಲಕ ಸೋಂಕಿತರ, ರೋಗಿಗಳ ಚಿಕಿತ್ಸೆಗೆ ಅನುಕೂಲ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ರಾಜ್ಯದ ವೈದ್ಯಕೀಯ ಆಕ್ಸಿಜನ್ ಸಂಗ್ರಹಣಾ ಸಾಮರ್ಥ್ಯದಲ್ಲಿ ಆಗಿರುವ ಹೆಚ್ಚಳ ಕುರಿತಂತೆ ಸದನಕ್ಕೆ ಮಾಹಿತಿ ನೀಡಲಾಯಿತು. pic.twitter.com/k2Vcjcdr6b
— Dr Sudhakar K (@mla_sudhakar) September 20, 2021
ಹಾಗೆಯೇ 14 – 18 ವರ್ಷದೊಳಗಿನ ಯುವ ಜನತೆಗೆ ಕೊರೋನಾ ಲಸಿಕೆ ನೀಡಿಕೆಗೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೂ ಅವರು ಈ ಸಂದರ್ಭದಲ್ಲಿ ಉತ್ತರಿಸಿದ್ದಾರೆ. ಹಾಗೆಯೇ, ಯುನಾನಿ ವೈದ್ಯರ ಖಾಯಮಾತಿಗೆ ಸಂಬಂಧಿಸಿದಂತೆಯೂ ಸುಧಾಕರ್ ಅವರು ಈ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ.
ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್ಎಚ್ಎಂ) ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯುನಾನಿ ವೈದ್ಯರನ್ನು ಖಾಯಂಗೊಳಿಸುವ ಕುರಿತಂತೆ ವಿಧಾನ ಪರಿಷತ್ ಸದಸ್ಯರಾದ ಶ್ರೀ ನಸೀರ್ ಅಹ್ಮದ್ ಅವರು ಇಂದು ಮೇಲ್ಮನೆ ಕಲಾಪದ ವೇಳೆ ಕೇಳಿದ ಪ್ರಶ್ನೆಗೆ ಉತ್ತರಿಸಲಾಯಿತು.@DHFWKA @MDNHM_Kar pic.twitter.com/bF96URECWU
— Dr Sudhakar K (@mla_sudhakar) September 20, 2021
ಕೋವಿಡ್-19 ಸಾಂಕ್ರಾಮಿಕ ರೋಗ ಕಾಣಿಸಿಕೊಂಡ ನಂತರ ರಾಜ್ಯದ ಆರೋಗ್ಯ ಮೂಲಸೌಕರ್ಯದಲ್ಲಿ ತರಲಾಗಿರುವ ಸುಧಾರಣೆ ಕುರಿತಂತೆ ಇಂದಿನ ವಿಧಾನ ಪರಿಷತ್ ಕಲಾಪದ ವೇಳೆ ಮಾನ್ಯ ಸದಸ್ಯರಾದ ಶ್ರೀ ಯು.ಬಿ.ವೆಂಕಟೇಶ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಲಾಯಿತು.@UbMlc pic.twitter.com/yW5gBs0xEY
— Dr Sudhakar K (@mla_sudhakar) September 20, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.