ಬೆಂಗಳೂರು: ಇತ್ತೀಚೆಗೆ ಜಪಾನ್ನ ಟೊಕಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ಅತ್ಯುತ್ತಮ ಸಾಧನೆ ಮಾಡಿ, ಪದಕ ಗಳಿಸಿದ ಕ್ರೀಡಾಪಟುಗಳನ್ನು ಅಭಿನಂದಿಸುವ ಕುರಿತಂತೆ ವಿಧಾನಪರಿಷತ್ತಿನಲ್ಲಿ ಇಂದು ನಿರ್ಣಯ ಕೈಗೊಳ್ಳಲಾಯಿತು.
ಸದನ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ನ ಪ್ರಕಾಶ್ ರಾಥೋಡ್, ಅಭಿನಂದನಾ ನಿರ್ಣಯ ಮಂಡಿಸಿ, ವಿಶೇಷವಾಗಿ ವಿಶೇಷ ಚೇತನ ಕ್ರೀಡಾಳುಗಳು ಪ್ಯಾರಾಲಿಂಪಿಕ್ಸ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಕರ್ನಾಟಕ ಮೂಲದ ಅಧಿಕಾರಿ ಸುಹಾಸ್ ಯತಿರಾಜ್ ಬೆಳ್ಳಿಪದಕ ಗೆದ್ದಿರುವುದು ಮಹತ್ವದ ಬೆಳವಣಿಗೆಯಾಗಿದೆ. ರಾಜ್ಯದ ತರಬೇತುದಾರ ಸತ್ಯನಾರಾಯಣ ಅವರೂ ಸಹ ಈ ಸಾಧನೆಯಲ್ಲಿ ಭಾಗಿಯಾಗಿದ್ದಾರೆ. ಇಂತಹ ಸಾಧಕ ಕ್ರೀಡಾಪಟುಗಳನ್ನು ರಾಜ್ಯ ಸರ್ಕಾರ ಗೌರವಿಸಬೇಕು. ಸದನ ಅಭಿನಂದಿಸಬೇಕು ಎಂದರು.
ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಿದ್ದು, ಅವರನ್ನು ರಾಜ್ಯ ಸರ್ಕಾರ ತುಂಬು ಹೃದಯದಿಂದ ಅಭಿನಂದಿಸುತ್ತದೆ ಎಂದರು.
ಪ್ರತಿಪಕ್ಷ ನಾಯಕ ಎಸ್. ಆರ್. ಪಾಟೀಲ, ಇಂತಹ ಸಂದರ್ಭದಲ್ಲಿ ವಿಶೇಷ ಕ್ರೀಡಾಪಟುಗಳನ್ನು ಅಭಿನಂದಿಸುವುದು ನಮ್ಮಲ್ಲರಿಗೂ ಹೆಮ್ಮೆ ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ, ಈಗಾಗಲೇ ರಾಜಭವನದಲ್ಲಿ ಕ್ರೀಡಾಪಟುಗಳನ್ನು ಗೌರವಿಸಿದ್ದು, ರಾಜ್ಯದ ಸುಹಾಸ್ ಯತಿರಾಜ್ ಮತ್ತು ಸತ್ಯನಾರಾಯಣ ಅವರಿಗೆ ಸರ್ಕಾರ ಸೂಕ್ತ ರೀತಿಯಲ್ಲಿ ಅಭಿನಂದಿಸಲಿದೆ ಎಂದರು.
ಸಭಾಪತಿ ಬಸವರಾಜ ಹೊರಟ್ಟಿ ಮಂಡಿಸಿದ ಅಭಿನಂದನಾ ನಿರ್ಣಯಕ್ಕೆ ಸದನ ಅನುಮೋದನೆ ನೀಡಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.