ಬೆಂಗಳೂರು: ನಗರದಲ್ಲಿ ಫ್ಲ್ಯಾಟ್ ಖರೀದಿ ಮಾಡುವವರಿಗೆ ರಾಜ್ಯ ಸರ್ಕಾರ ಸಂತಸದ ಸುದ್ದಿಯೊಂದನ್ನು ನೀಡಿದೆ. ಈ ಸಂಬಂಧ ಮುದ್ರಾಂಕ ಶುಲ್ಕ ಕಾಯ್ದೆ 1957 ಕ್ಕೆ ತಿದ್ದುಪಡಿ ಮಾಡಿ, ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗಿದೆ.
ಈ ಬಗ್ಗೆ ಸಚಿವ ಆರ್. ಅಶೋಕ್ ಮಾತನಾಡಿದ್ದು, ರಾಜ್ಯದಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ತೆಗೆದುಕೊಳ್ಳಲಾಗಿದ್ದ ನಿರ್ಣಯದಂತೆ ಮುದ್ರಾಂಕ ಶುಲ್ಕ ತಗ್ಗಿಸಲಾಗಿದೆ ಎಂದು ತಿಳಿಸಿದ್ದಾರೆ.
2021 – 22 ನೇ ಸಾಲಿನಲ್ಲಿ ಬಜೆಟ್ ಸಂದರ್ಭದಲ್ಲಿ 35 – 45 ಲಕ್ಷ ರೂ. ಮೌಲ್ಯದ ಫ್ಲ್ಯಾಟ್ಗಳ ನೋಂದಣಿಗೆ ಮುದ್ರಾಂಕ ಶುಲ್ಕವನ್ನು 5% ದಿಂದ 3% ಗೆ ಇಳಿಕೆ ಮಾಡುವುದಾಗಿ ಘೋಷಿಸಲಾಗಿತ್ತು. ಅದರನ್ವಯವೇ ಇದೇ ಮೊದಲ ಬಾರಿಗೆ ಮುದ್ರಾಂಕ ಶುಲ್ಕ ಕಡಿತ ಗೊಳಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಕೊರೋನಾ ಹಿನ್ನೆಲೆಯಲ್ಲಿ ನಗರದಲ್ಲಿ ಫ್ಲ್ಯಾಟ್ ಖರೀದಿಸುವವರ ಸಂಖ್ಯೆ ಕಡಿಮೆಯಾಗಿದೆ. ಈ ನಿಟ್ಟಿನಲ್ಲಿ ಮುಂದ್ರಾಂಕ ಶುಲ್ಕ ಕಡಿತದಿಂದಾಗಿ ಜನಸಾಮಾನ್ಯರು ಸಹ ಫ್ಲ್ಯಾಟ್ ಗಳನ್ನು ಖರೀದಿಸಲು ಸಾಧ್ಯವಾಗಲಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.