ನವದೆಹಲಿ: ಕೋವಿಡ್-19 ಲಸಿಕೆಯ ರಫ್ತನ್ನು ಪುನರಾರಂಭಿಸುವ ಭಾರತದ ನಿರ್ಧಾರವನ್ನು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿಗಳ ಸ್ವಾಮಿನಾಥನ್ ಅವರು ಮಂಗಳವಾರ ಸ್ವಾಗತಿಸಿದ್ದಾರೆ. ಜಾಗತಿಕ ಲಸಿಕಾ ಅಭಿಯಾನದ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಈ ನಿರ್ಧಾರ ಬಲು ದೂರ ಸಾಗುತ್ತದೆ ಎಂದು ಅವರು ಅಭಿಪ್ರಾಯಿಸಿದ್ದಾರೆ.
ಈ ವರ್ಷದ 4ನೇ ತ್ರೈಮಾಸಿಕ ದಲ್ಲಿ ಭಾರತವು ಲಸಿಕಾ ಮೈತ್ರಿಯನ್ನು ಪುನರಾರಂಭ ಮಾಡಲಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮಾನ್ಸೂಖ್ ಮಾಂಡವೀಯ ಸೋಮವಾರ ಘೋಷಣೆ ಮಾಡಿದ್ದಾರೆ.
“ಲಸಿಕಾ ಮೈತ್ರಿಯಡಿ ನಾವು ಜಗತ್ತಿಗೆ ಸಹಾಯ ಮಾಡುತ್ತೇವೆ ಮತ್ತು ನಾಲ್ಕನೇ ತ್ರೈಮಾಸಿಕದಲ್ಲಿ ರಫ್ತು ಆರಂಭಿಸುತ್ತೇವೆ. ಮುಂದಿನ ತಿಂಗಳು ಸರಕಾರ ಲಸಿಕೆ ಉತ್ಪಾದಕರಿಂದ 30 ಕೋಟಿ ಡೋಸ್ ಲಸಿಕೆಯನ್ನು ನಿರೀಕ್ಷೆ ಮಾಡುತ್ತಿದೆ” ಎಂದು ಮಾಂಡವೀಯ ತಿಳಿಸಿದ್ದಾರೆ.
ಕೊರೋನಾದ ಎರಡನೇ ಅಲೆ ಭಾರತವನ್ನು ಅಪ್ಪಳಿಸುವ ಮುನ್ನ ಕೇಂದ್ರ ಸರಕಾರ ‘ವ್ಯಾಕ್ಸಿನ್ ಮೈತ್ರಿ’ ಅಡಿಯಲ್ಲಿ ಹಲವು ರಾಷ್ಟ್ರಗಳಿಗೆ ಭಾರತದಲ್ಲಿ ತಯಾರಾದ ಲಸಿಕೆಗಳನ್ನು ಕಳುಹಿಸಿಕೊಟ್ಟಿತ್ತು. ಆದರೆ ಎರಡನೇ ಅಲೆ ಅಪ್ಪಳಿಸಿದ ಬಳಿಕ ಭಾರತದಲ್ಲಿ ಲಸಿಕೆಗೆ ಬೇಡಿಕೆ ತೀವ್ರಗತಿಯಲ್ಲಿ ಏರಿದ ಕಾರಣ ವ್ಯಾಕ್ಸಿನ್ ಮೈತ್ರಿಯನ್ನು ರದ್ದುಪಡಿಸಲಾಗಿತ್ತು. ಇದೀಗ ಭಾರತ ತನ್ನ ಅಪಾರ ಜನಸಂಖ್ಯೆಗೆ ಲಸಿಕೆಯನ್ನು ನೀಡಿದೆ, ಹೀಗಾಗಿ ಲಸಿಕೆ ರಫ್ತನ್ನು ಮತ್ತೆ ಆರಂಭಿಸಲು ನಿರ್ಧರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.