ಬೆಂಗಳೂರು: ರಾಜ್ಯದ ಗೃಹ ಮಂಡಳಿಯ ವತಿಯಿಂದ ನಗರದ ಅನೇಕಲ್ ಮುಖ್ಯರಸ್ತೆಯಲ್ಲಿ ನಿರ್ಮಿಸಲಾಗಿರುವ ಬಹುಮಹಡಿ ವಸತಿ ಸಮುಚ್ಚಯವನ್ನು ಅರ್ಜಿ ಸಲ್ಲಿಸಿದ ಅರ್ಜಿದಾರರರಿಗೆ ಹಂಚಿಕೆ ಮಾಡಲು ಸರ್ಕಾರ ನಿರ್ಧರಿಸಿದೆ.
ಈ ಸಂಬಂಧ ಸೆ. 24 ರಂದು ಇ – ಲಾಟರಿ ಮೂಲಕ ಈ ಫ್ಲ್ಯಾಟ್ಗಳ ಹಂಚಿಕೆ ನಡೆಯಲಿದೆ. ಇದಕ್ಕಾಗಿ ಅರ್ಜಿ ಸಲ್ಲಿಕೆ ಮಾಡಿರುವವರಿಗೆ ಈ ಬಹುಮಹಡಿ ಫ್ಲ್ಯಾಟ್ಗಳನ್ನು ಹಂಚಿಕೆ ಮಾಡುವುದಾಗಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಈ ಬಗ್ಗೆ ಸಚಿವ ವಿ. ಸೋಮಣ್ಣ ಅವರು ಟ್ವೀಟ್ ಮಾಡಿದ್ದು, ರಾಜ್ಯದ ಗೃಹ ಮಂಡಳಿಯ ವತಿಯಿಂದ ಬೆಂಗಳೂರಿನ ಅನೇಕಲ್ ಮುಖ್ಯರಸ್ತೆಯಲ್ಲಿ ನಿರ್ಮಿಸಲಾದ ಸೂರ್ಯನಗರ ಒಂದನೇ ಹಂತದ ಸೂರ್ಯ – ಎಲಿಗೆನ್ಸ್ ಬಹುಮಹಡಿ ವಸತಿ ಸಮುಚ್ಚಯದ ವಿವಿಧ ವರ್ಗದ ಫ್ಲ್ಯಾಟ್ಗಳಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ ಸೆ. 24 ರಂದು ಇ -ಲಾಟರಿ ಮೂಲಕ ಹಂಚಿಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ khb.karnataka.gov.in ಗೆ ಸಂಪರ್ಕಿಸಿ ಎಂದು ಬರೆದುಕೊಂಡಿದ್ದಾರೆ.
ರಾಜ್ಯ ಗೃಹ ಮಂಡಳಿಯ ವತಿಯಿಂದ ಬೆಂಗಳೂರಿನ ಅನೇಕಲ್ ಮುಖ್ಯರಸ್ತೆಯಲ್ಲಿ ನಿರ್ಮಿಸಲಾಗಿರುವ ಸೂರ್ಯನಗರ ಒಂದನೇ ಹಂತದ ಸೂರ್ಯ-ಎಲಿಗೆನ್ಸ್ ಬಹುಮಹಡಿ ವಸತಿ ಸಮುಚ್ಚಯದ ವಿವಿಧ ವರ್ಗದ ಫ್ಲಾಟ್ ಗಳಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ ಸೆ.24ರಂದು ಇ-ಲಾಟರಿಯ ಮೂಲಕ ಹಂಚಿಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆhttps://t.co/dsFN9gs7sM ಸಂಪರ್ಕಿಸಿ pic.twitter.com/qnlxS25wa6
— V. Somanna (@VSOMANNA_BJP) September 22, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.