ನವದೆಹಲಿ: ಸರ್ಕಾರವು ಸೂಕ್ತ ಬದಲಾವಣೆಗಳೊಂದಿಗೆ ಹೊಸ ಸಹಕಾರಿ ನೀತಿಯನ್ನು ತರಲಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ.
ಹೊಸ ನೀತಿಯನ್ನು ಈ ವರ್ಷದ ಅಂತ್ಯದೊಳಗೆ ಜಾರಿಗೆ ತರಲಾಗುವುದು ಎಂದಿದ್ದಾರೆ.
ಮೊದಲ ಕೊಅಪರೇಟಿವ್ ಕಾನ್ಫರೆನ್ಸ್ ಅನ್ನು ಉದ್ದೇಶಿಸಿ ಮಾತನಾಡಿದ ಅವರು, ಸಹಕಾರಿ ಕ್ಷೇತ್ರವನ್ನು ಬಲಪಡಿಸುವ ಅಗತ್ಯವಿದೆ ಮತ್ತು ಸಂಪೂರ್ಣ ನೆಟ್ವರ್ಕ್ನಲ್ಲಿರುವ ಎಲ್ಲಾ ಪ್ರಮುಖ ಘಟಕಗಳು ಶೀಘ್ರದಲ್ಲೇ ಕಂಪ್ಯೂಟರೀಕೃತಗೊಳ್ಳಲಿವೆ ಎಂದು ಹೇಳಿದರು.
“ಸಹಕಾರಿ ರಾಜ್ಯಕ್ಕೆ ಸಂಬಂಧಿಸಿದ ವಿಷಯ ಎಂದು ಅನೇಕ ಜನರು ಹೇಳುತ್ತಾರೆ. ಆದರೆ ನಾವು ರಾಜ್ಯಗಳೊಂದಿಗೆ ಯಾವುದೇ ಮುಖಾಮುಖಿ ನಡೆಸುವುದಿಲ್ಲ ಮತ್ತು ಬಡತನ ನಿವಾರಣೆಯಲ್ಲಿ ಅವರೊಂದಿಗೆ ಕೆಲಸ ಮಾಡುತ್ತೇವೆ ಮತ್ತು ಸಹಕಾರದ ವಿಷಯದಲ್ಲಿ ಅವರಿಗೆ ಸಹಾಯ ಮಾಡುತ್ತೇವೆ” ಎಂದು ಶಾ ಹೇಳಿದ್ದಾರೆ.
ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು (ಪಿಎಸಿ), ಜಿಲ್ಲಾ ಸಹಕಾರಿ ಬ್ಯಾಂಕುಗಳು, ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಮತ್ತು ಇತರ ಪ್ರಮುಖ ಹಣಕಾಸು ಸಂಸ್ಥೆಗಳನ್ನು ಹೊಸ ಸಾಫ್ಟ್ವೇರ್ ವ್ಯವಸ್ಥೆಯೊಂದಿಗೆ ನವೀಕರಿಸಲಾಗುವುದು ಎಂದು ಅವರು ಹೇಳಿದ್ದಾರೆ.
ದೇಶದ ಮೀನುಗಾರರಿಗಾಗಿ ಹೊಸ ಸಹಕಾರವನ್ನು ರಚಿಸಲಾಗುವುದು ಎಂದು ಶಾ ಘೋಷಿಸಿದರು, ಇದು ಅವರ ವ್ಯವಹಾರದಲ್ಲಿ ಅನೇಕ ರೀತಿಯಲ್ಲಿ ಸಹಾಯ ಮಾಡುತ್ತದೆ ಎಂದಿದ್ದಾರೆ.
2025 ರ ವೇಳೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿಯನ್ನು ಸಾಧಿಸುವಲ್ಲಿ ಸಹಕಾರಿ ವಲಯವು ಪ್ರಮುಖ ಪಾತ್ರ ವಹಿಸುತ್ತದೆ ಎಂದಿದ್ದಾರೆ.
मोदी जी ने एक मंत्र दिया है- सहकार से समृद्धि तक।
मैं आज मोदी जी को आश्वस्त करना चाहता हूं कि सहकारिता क्षेत्र भी आपके 5 ट्रिलियन डॉलर की इकोनॉमी को पूरा करने के लिए एड़ी चोटी का जोर लगा देगी- श्री @AmitShah #SahkarSeSamriddhi pic.twitter.com/1oT7tn780Z
— BJP (@BJP4India) September 25, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.