ಬೆಂಗಳೂರು: ಸರ್ಕಾರಕ್ಕೆ ಹೆಚ್ಚುವರಿ ಹೊರೆಯಾದರೂ ರಾಜ್ಯದ ರೈತರ 2 ಲಕ್ಷಕ್ಕೂ ಅಧಿಕ ನೀರಾವರಿ ಪಂಪ್ಸೆಟ್ಗಳ ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಸಕ್ರಮಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಈ ಸಂಬಂಧ ಸಚಿವ ಸುನಿಲ್ ಕುಮಾರ್ ಅವರು ವಿಧಾನ ಸಭೆಯಲ್ಲಿ ಮಾಹಿತಿ ನೀಡಿದ ಪ್ರಕಾರ, ಈ ವರೆಗೆ ಸುಮಾರು 2.57 ಲಕ್ಷ ಪಂಪ್ಸೆಟ್ಗಳ ವಿದ್ಯುತ್ ಸಂಪರ್ಕ ಸಕ್ರಮಗೊಳಿಸುವಂತೆ ಅರ್ಜಿ ಸಲ್ಲಿಕೆಯಾಗಿದೆ. ಅವುಗಳ ವಿಲೇವಾರಿ ಕಾರ್ಯ ನಡೆಯಬೇಕಿದೆ.
ಹಾಗೆಯೇ, ಈ ವರ್ಷ 22,897 ಅಕ್ರಮ ಪಂಪ್ಸೆಟ್ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಜೊತೆಗೆ ವಿವಿಧ ವಿದ್ಯುತ್ ಸಂಪರ್ಕ ಪೂರೈಕೆ ಕಂಪೆನಿಗಳಿಗೆ ಸಂಬಂಧಿಸಿದಂತೆ 2018 – 2020 ರ ನಡುವೆ 4. 41 ಲಕ್ಷ ಅಕ್ರಮ ಸಂಪರ್ಕಗಳನ್ನು ಸಕ್ರಮಗೊಳಿಸಲಾಗಿದೆ. ಅಕ್ರಮ ಸಂಪರ್ಕದಿಂದ ನಷ್ಟ ಉಂಟಾಗುತ್ತಿದ್ದು, ಈ ಕಾರಣಕ್ಕಾಗಿ ಸಕ್ರಮ ಗೊಳಿಸಲು ಚಿಂತನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.