ನವದೆಹಲಿ: ಪ್ರಧಾನಿ ಮೋದಿ ಅವರು ಮಹತ್ವಾಕಾಂಕ್ಷೆಯ ಮನ್ ಕಿ ಬಾತ್ ಕಾರ್ಯಕ್ರಮದ 81 ನೇ ಅವತರಣಿಕೆಯಲ್ಲಿ ದೇಶವಾಸಿಗಳನ್ನುದ್ದೇಶಿಸಿ ಇಂದು ಮಾತನಾಡಿದರು.
ವಿಶ್ವ ನದಿ ದಿನದ ಬಗ್ಗೆ ಮಾತನಾಡಿದ ಅವರು, ನೀರಿನ ಮಹತ್ವದ ಬಗ್ಗೆ ಮಾತನಾಡಿದರು. ನೀರಿನ ಹನಿ ಹನಿಯೂ ಪ್ರಾಮುಖ್ಯವಾಗಿದೆ. ದೇಶವಾಸಿಗಳು ವರ್ಷಕ್ಕೆ ಒಂದು ಬಾರಿಯಾದರೂ ನದಿ ದಿನವನ್ನು ಆಚರಿಸುವಂತೆ ಅವರು ಮನವಿ ಮಾಡಿದರು. ನದಿಗಳು ನಮಗೆ ಯಾವುದೇ ಸ್ವಾರ್ಥವಿಲ್ಲದೆ ಜೀವಜಲ ನೀಡುತ್ತಿದ್ದು, ಅಂತಹ ಪರೋಪಕಾರಿಯನ್ನು ಸ್ಮರಿಸುವಂತೆ ಅವರು ತಿಳಿಸಿದರು.
ದೇಶದ ರಾಜಸ್ಥಾನ, ಗುಜರಾತ್ ಸೇರಿದಂತೆ ಇನ್ನೂ ಹಲವು ರಾಜ್ಯಗಳಲ್ಲಿ ನೀರಿನ ಅಭಾವವಿದೆ. ಬರಗಾಲದಂತಹ ಸಮಸ್ಯೆಗಳು ಸಹ ಸೃಷ್ಟಿಯಾಗುತ್ತಿದೆ. ಈ ನಿಟ್ಟಿನಲ್ಲಿ ನೀರನು ಉಳಿಸಿ, ವೃದ್ಧಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಅನುಸರಿಸಬೇಕು ಎಂದು ಅವರು ಹೇಳಿದರು. ನಾವೆಲ್ಲರೂ ವರ್ಷಕ್ಕೆ ಒಂದು ಬಾರಿಯಾದರೂ ನದಿ ಉತ್ಸವವನ್ನು ಆಚರಿಸಬೇಕು ಎಂದು ಅವರು ಹೇಳಿದರು.
ದೇಶದ ಪವಿತ್ರ ಗಂಗಾ ನದಿಯನ್ನು ಸ್ವಚ್ಛಗೊಳಿಸುವ ನಮಾಮಿ ಗಂಗೆ ಯೋಜನೆಯು ಅದ್ಭುತ ಯಶಸ್ಸು ಕಾಣುತ್ತಿದೆ. ಹಾಗೆಯೇ ತಮಿಳುನಾಡಿನ ನಾಗಾ ನದಿಗೆ ಅಲ್ಲಿನ ಸಾರ್ವಜನಿಕರು ಮರುಜೀವ ತುಂಬಿದ್ದು, ಡ್ಯಾಂ ಸಹ ನಿರ್ಮಿಸಿದ್ದಾರೆ. ಇದರಿಂದ ಅವರಿಗೆ ನೀರಿನ ಸಮಸ್ಯೆ ಪರಿಹಾರವಾಗಿದೆ ಎಂದು ಮೋದಿ ಇದೇ ಸಂದರ್ಭದಲ್ಲಿ ತಿಳಿಸಿದರು. ದೇಶದ ಪ್ರತಿಯೊಬ್ಬರೂ ನದಿಯ ಸ್ವಚ್ಛತೆಗಾಗಿ ಪ್ರಯತ್ನ ನಡೆಸಬೇಕು ಎಂದು ಅವರು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.