ನವದೆಹಲಿ: ಭಾರತದಲ್ಲಿ ಧಾರ್ಮಿಕ ಪ್ರವಾಸೋದ್ಯಮ ಕ್ಷೇತ್ರವು ಅತ್ಯಂತ ವಿಶಾಲವಾಗಿದೆ ಮತ್ತು ದೇಶದಲ್ಲಿ ಅದಕ್ಕೆ ದೊಡ್ಡ ಅವಕಾಶಗಳಿವೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಸೋಮವಾರ ವಿಶ್ವ ಪ್ರವಾಸೋದ್ಯಮ ದಿನದ ಸಂದರ್ಭದಲ್ಲಿ ಹೇಳಿದರು.
ಜಮ್ಮು ಮತ್ತು ಕಾಶ್ಮೀರ ಪ್ರವಾಸದಲ್ಲಿರುವ ಠಾಕೂರ್, ಜಮ್ಮು ಮತ್ತು ಕಾಶ್ಮೀರದ ಗಂದೇರ್ಬಾಲ್ ಜಿಲ್ಲೆಯ ಮಾತಾ ಖೀರ್ ಭವಾನಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸೋದ್ಯಮದ ಕುರಿತು ಮಾತನಾಡಿದ ಅವರು, 370 ಮತ್ತು 35 ಎ ವಿಧಿಯನ್ನು ರದ್ದುಗೊಳಿಸಿದ ನಂತರ ಶಾಂತಿ ಪುನಃಸ್ಥಾಪನೆಯಾದ ಬಳಿಕ ಪ್ರವಾಸೋದ್ಯಮ ಕ್ಷೇತ್ರವು ಉತ್ತೇಜನ ಪಡೆದಿದೆ. ಈಗ ಜನರು ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ ಮತ್ತು ಪ್ರವಾಸಿಗರ ಸಂಖ್ಯೆಯೂ ಇಲ್ಲಿ ಹೆಚ್ಚಾಗಿದೆ ಎಂದಿದ್ದಾರೆ.
“ಮಾತಾ ಖೀರ್ ಭವಾನಿ ದೇವಸ್ಥಾನವು ಧಾರ್ಮಿಕ ಪ್ರವಾಸೋದ್ಯಮಕ್ಕೆ ಬಹಳ ಮುಖ್ಯವಾಗಿದೆ. ಇದು ಕೇವಲ ಕಾಶ್ಮೀರಿ ಪಂಡಿತರ ನಂಬಿಕೆಯ ಕೇಂದ್ರ ಮಾತ್ರವಲ್ಲ, ದೇಶದ ಇತರ ಭಾಗಗಳಿಂದ ಭಕ್ತರು ದೇವಿಯನ್ನು ನೋಡಲು ಈ ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ” ಎಂದು ಕೇಂದ್ರ ಸಚಿವರು ಹೇಳಿದರು.
ದೇಶದ ವಿವಿಧ ಭಾಗಗಳಲ್ಲಿ ಧಾರ್ಮಿಕತೆಯನ್ನು ಉಲ್ಲೇಖಿಸಿದ ಅವರು “ನಾನು ಭಾರತದಲ್ಲಿ ಧಾರ್ಮಿಕ ಪ್ರವಾಸೋದ್ಯಮದ ಕ್ಷೇತ್ರವು ದೊಡ್ಡದಾಗಿದೆ ಎಂದು ವೈಯಕ್ತಿಕವಾಗಿ ನಂಬುತ್ತೇನೆ. ನೀವು ಹಿಮಾಚಲ ಪ್ರದೇಶದಲ್ಲಿ ನೋಡಿದರೆ, ಜನಸಂಖ್ಯೆಗಿಂತ ಮೂರು ಪಟ್ಟು ಹೆಚ್ಚು ಪ್ರವಾಸಿಗರು ಇದ್ದಾರೆ ಮತ್ತು ಅದರಲ್ಲಿ ಮೂರನೇ ಎರಡು ಭಾಗ ಪ್ರವಾಸಿಗರು ಧಾರ್ಮಿಕ ಪ್ರವಾಸಿಗರು” ಎಂದಿದ್ದಾರೆ.
ಕಣಿವೆಗೆ ಭೇಟಿ ನೀಡುವಂತೆ ಅವರು ಜನರಿಗೆ ಮನವಿ ಮಾಡಿದ ಅವರು, “ಕಾಶ್ಮೀರವು ಬಹಳ ಸುಂದರವಾದ ಸ್ಥಳವಾಗಿದೆ. ಮಾತಾ ವೈಷ್ಣೋ ದೇವಿ ಮತ್ತು ಬಾಬಾ ಅಮರನಾಥರಂತೆ, ಅನೇಕ ಜನರು ಮಾತಾ ಖೀರ್ ಭವಾನಿ ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ. ಇವು ಧಾರ್ಮಿಕ ಸ್ಥಳಗಳು ಮತ್ತು ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಸ್ಥಳಗಳಾಗಿವೆ. ಇವು ನಂಬಿಕೆಗಳೊಂದಿಗೆ ಬಹಳ ಆಳವಾದ ಒಡನಾಟವನ್ನು ಹೊಂದಿವೆ” ಎಂದಿದ್ದಾರೆ
ಕಲಂ 370 ಮತ್ತು 35 ಎ ರದ್ದಾದ ನಂತರ, ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಎಲ್ಲಾ ಯೋಜನೆಗಳಿಗೆ ಉತ್ತೇಜನ ನೀಡಲು ಪ್ರಯತ್ನಿಸುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಕೇಂದ್ರ ಸಚಿವರು ವಿವಿಧ ಪ್ರದೇಶಗಳಲ್ಲಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅವಲೋಕಿಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.