ಬುದ್ಗಾಂ: ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಜಮ್ಮು ಮತ್ತು ಕಾಶ್ಮೀರದ ಬುದ್ಗಾಂನಲ್ಲಿ ಆಯೋಜಿಸಲಾದ ವೈದ್ಯಕೀಯ ಶಿಬಿರದಲ್ಲಿ 15 ದಿವ್ಯಾಂಗರಿಗೆ ಮಡಚಬಹುದಾದ ಗಾಲಿಕುರ್ಚಿಗಳನ್ನು ವಿತರಿಸಿದೆ.
ವೈದ್ಯಕೀಯ ಶಿಬಿರವನ್ನು ಸಿಆರ್ಪಿಎಫ್ನ 35ನೇ ಬೆಟಾಲಿಯನ್ ವತಿಯಿಂದ ಬುದ್ಗಾಂನ ಸರ್ಕಾರಿ ಶಾಲೆಯೊಂದರಲ್ಲಿ ಆಯೋಜಿಸಲಾಗಿತ್ತು. ಬುದ್ಗಾಂ ಮತ್ತು ಶ್ರೀನಗರ ಜಿಲ್ಲೆಗಳಿಂದ ಸುಮಾರು 300 ಜನರು ಶಿಬಿರದಲ್ಲಿ ಭಾಗವಹಿಸಿದ್ದರು.
ಸಿಆರ್ ಪಿಎಫ್ 35ನೇ ಬೆಟಾಲಿಯನ್ನ ವೈದ್ಯಾಧಿಕಾರಿಗಳು ರೋಗಿಗಳನ್ನು ಸಮಾಲೋಚಿಸಿ ಉಚಿತ ಔಷಧಿಗಳನ್ನು ವಿತರಿಸಿದರು. ಜಿಲ್ಲಾ ಆಸ್ಪತ್ರೆಯ ವೈದ್ಯರು ರೋಗಿಗಳನ್ನು ಪರೀಕ್ಷಿಸಲು ಶಿಬಿರದಲ್ಲಿ ಭಾಗಿಯಾದರು.
ದೂರದ ಪ್ರದೇಶಗಳಲ್ಲಿರುವ ಜನರನ್ನು ತಲುಪಲು ಮತ್ತು ಅವರಿಗೆ ವೈದ್ಯಕೀಯ ನೆರವು ನೀಡುವ ಉದ್ದೇಶದಿಂದ ಈ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸಿಆರ್ಪಿಎಫ್ ಹೇಳಿದೆ.
“ಈ ರೀತಿಯ ಶಿಬಿರಗಳು ಜನರೊಂದಿಗಿನ ಸಂಪರ್ಕವನ್ನು ಹೆಚ್ಚಿಸುತ್ತವೆ ಮತ್ತು ಸಿಆರ್ಪಿಎಫ್ ಮತ್ತು ಸ್ಥಳೀಯ ಜನರ ನಡುವಿನ ಬಾಂಧವ್ಯವನ್ನು ಬಲಪಡಿಸುವಲ್ಲಿ ಬಹಳ ದೂರ ಸಾಗುತ್ತವೆ” ಎಂದು ಸಿಆರ್ಪಿಎಫ್ ಹೇಳಿಕೆಯಲ್ಲಿ ತಿಳಿಸಿದೆ.
ವೈದ್ಯಕೀಯ ಶಿಬಿರವನ್ನು ಆಯೋಜಿಸಿದ್ದಕ್ಕಾಗಿ ಸಿಆರ್ಪಿಎಫ್ನ ಪ್ರಯತ್ನಗಳನ್ನು ಸ್ಥಳೀಯರು ಶ್ಲಾಘಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.