ನವದೆಹಲಿ: 2020 ರ ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಅಲ್ಲದೇ, ದೆಹಲಿ ಗಲಭೆ ಪೂರ್ವ ನಿಯೋಜಿತ ಕೃತ್ಯ ಎಂದು ಹೇಳಿದೆ.
“ಗಲಭೆ ಕಾನೂನು ಸುವ್ಯವಸ್ಥೆಗೆ ಭಂಗ ತರಲು ನಡೆಸಲಾದ ಪೂರ್ವ ಯೋಜಿತ ಕೃತ್ಯ ಮತ್ತು ಪೂರ್ವಭಾವಿ ಪಿತೂರಿ. ಇಂತಹ ಘಟನೆಗಳು ಕ್ಷಣಾರ್ಧದಲ್ಲಿ ಏಕಾಏಕಿ ನಡೆದಿಲ್ಲ” ಎಂದು ನ್ಯಾಯಮೂರ್ತಿ ಸುಬ್ರಮಣಿಯನ್ ಪ್ರಸಾದ್ ಹೇಳಿದ್ದಾರೆ.
ದೆಹಲಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ರತನ್ ಲಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ಇಬ್ರಾಹಿಂ ಎಂಬಾತನ ಜಾಮೀನು ಅರ್ಜಿಯನ್ನು ಪರಿಶೀಲಿಸಿದ ಸಂದರ್ಭ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹತ್ಯೆ ನಡೆಸಿದ ವೇಳೆ ವ್ಯವಸ್ಥಿತ ರೀತಿಯಲ್ಲಿ ಸಿಸಿಟಿವಿ ಸಂಪರ್ಕ ಕಡಿತ ಮಾಡಲಾಗಿತ್ತು ಎಂಬುದನ್ನು ನ್ಯಾಯಾಧೀಶರು ಗಮನಿಸಿದ್ದಾರೆ. ಅಸಂಖ್ಯಾತ ಗಲಭೆಕೋರರು ನಿರ್ದಯವಾಗಿ ದೊಣ್ಣೆಗಳು, ಆಯುಧ ಇತ್ಯಾದಿಗಳಿಂದ ಪೊಲೀಸ್ ಅಧಿಕಾರಿಗಳ ಮೇಲೆ ದಾಳಿ ನಡೆಸುವುದಕ್ಕೂ ಮೊದಲು ಸಿಸಿ ಕ್ಯಾಮರಗಳನ್ನು ಧ್ವಂಸ ಮಾಡಲಾಗಿತ್ತು ಎಂಬ ಅಂಶವನ್ನು ಉಲ್ಲೇಖಿಸಿದ್ದಾರೆ.
ಕೇಂದ್ರ ಸರಕಾರ ಜಾರಿಗೆ ತಂದ ಸಿಎಎ ಕಾಯ್ದೆಯನ್ನು ವಿರೋಧಿಸುವ ನೆಪದಲ್ಲಿ ಕೆಲವು ದುಷ್ಕರ್ಮಿಗಳು ದೆಹಲಿಯಲ್ಲಿ ದೊಡ್ಡಮಟ್ಟದ ಗಲಭೆಯನ್ನು ನಡೆಸಿದ್ದರು. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಲುವಾಗಿ ಇಂತಹ ಗಲಭೆಗಳನ್ನು ನಡೆಸಲಾಗಿತ್ತು ಎಂಬುದು ಸ್ಪಷ್ಟವಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.