ನವದೆಹಲಿ: ‘ಚಾರ್ ಧಾಮ್’ ಸರ್ವ ಋತು ರಸ್ತೆ 2022 ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ.
ಉತ್ತರಾಖಂಡ ಬಿಜೆಪಿ ಚುನಾವಣಾ ಉಸ್ತುವಾರಿಗಳನ್ನು ಉದ್ದೇಶಿಸಿ ವರ್ಚುವಲ್ ಮೋಡ್ ಮೂಲಕ ಮಾತನಾಡಿದ ನಡ್ಡಾ, “ಚಾರ್ ಧಾಮ್ ಸರ್ವ ಋತು ರಸ್ತೆ 2022 ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಇದರಿಂದ ಉತ್ತರಾಖಂಡದಲ್ಲಿ ಪ್ರವಾಸೋದ್ಯಮ ಹೊಸ ಎತ್ತರವನ್ನು ಮುಟ್ಟಲಿದೆ ಮತ್ತು ಹೆಚ್ಚಿನ ಅಭಿವೃದ್ಧಿಯ ಮಾರ್ಗಗಳು ತೆರೆಯಲಿವೆ” ಎಂದಿದ್ದಾರೆ.
“ನಾನು ಪಕ್ಷದ ಕಾರ್ಯಕರ್ತರಿಗೆ ಹೇಳಲು ಬಯಸುದೇನೆಂದರೆ, ಬೂತ್ ಮಟ್ಟದ ಕಾರ್ಯಕರ್ತರ ಆಧಾರದ ಮೇಲೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಬಿಜೆಪಿ ಮಾತ್ರ. ಪಕ್ಷದ ಕಾರ್ಯಕರ್ತರು ಪಕ್ಷದ ಗೆಲುವಿಗೆ ಸಹಾಯ ಮಾಡುವುದಲ್ಲದೆ ದೇಶದ ಅಭಿವೃದ್ಧಿಯ ಎಲ್ಲಾ ಅಭಿಯಾನಗಳಲ್ಲಿ ಪೂರ್ಣ ಮನಸ್ಸಿನಿಂದ ಭಾಗವಹಿಸುತ್ತಾರೆ” ಎಂದು ನಡ್ಡಾ ಹೇಳಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಾಡಿದ ಕೆಲಸದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತೆ ಅವರು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದೆ ಎಂದು ಅವರು ಹೇಳಿದರು.
“ನಾವು ಮಾಡಿದ ಕೆಲಸಗಳ ದಾಖಲೆ ನಮ್ಮ ಬಳಿ ಇದೆ. ನಾನು ಕಾಂಗ್ರೆಸ್ ಪಕ್ಷಕ್ಕೆ ಅವರ ದಾಖಲೆಗಳೊಂದಿಗೆ ಬರುವಂತೆ ಸವಾಲು ಹಾಕುತ್ತೇನೆ. ನಮ್ಮ ಬೂತ್ ಮಟ್ಟದ ಕಾರ್ಯಕರ್ತ ಕೂಡ ಕಾಂಗ್ರೆಸ್ ಜೊತೆ ಚರ್ಚಿಸಬಹುದು ಏಕೆಂದರೆ ನಾವು ಅಷ್ಟುಪಾರದರ್ಶಕವಾಗಿದ್ದೇವೆ” ಎಂದು ಅವರು ಹೇಳಿದರು.
ಕೋವಿಡ್ -19 ವಿರುದ್ಧ ಲಸಿಕೆ ಹಾಕಿಸಿಕೊಳ್ಳಲು ಪಕ್ಷದ ಕಾರ್ಯಕರ್ತರು ಜನರಿಗೆ ಸಹಾಯ ಮಾಡಬೇಕು ಎಂದು ಅವರು ಹೇಳಿದರು.
ಉತ್ತರಾಖಂಡದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ಚುನಾವಣೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.