ಮೈಸೂರು: ಕೆ.ಆರ್. ಕ್ಷೇತ್ರದಲ್ಲಿ 100% ರಷ್ಟು ಲಸಿಕೆ ನೀಡಲಾಗಿದೆ. ಅತಿ ಹೆಚ್ಚು ಕೊವಿಡ್ ಲಸಿಕೆ ಈ ಕ್ಷೇತ್ರದಲ್ಲಿ ನೀಡಲಾಗಿದೆ.
ಶಾಸಕ ರಾಮದಾಸ್ ಅವರ ನೇತೃತ್ವದಲ್ಲಿ ಈ ಲಸಿಕಾ ಅಭಿಯಾನ ನಡೆಸಲಾಗಿದೆ. ಅಭಿಯಾನಕ್ಕೆ ಹಲವು ಸಂಘ ಸಂಸ್ಥೆಗಳು ಸಾಥ್ ನೀಡಿವೆ ಎಂದು ಮೈಸೂರಿನಲ್ಲಿ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಶೇ. 80 ರಷ್ಟು ಲಸಿಕೆ ನೀಡಲಾಗಿದೆ. ಮೈಸೂರಿನ ಕೆ.ಆರ್. ಕ್ಷೇತ್ರದಲ್ಲಿ ಶೇ. 100 ಲಸಿಕೆ ನೀಡಿಕೆ ಆಗಿದೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ರಾಜ್ಯದಲ್ಲೇ ಮೊದಲ ಅತಿ ಹೆಚ್ಚು ಲಸಿಕೆ ಕ್ಷೇತ್ರ ಕೆ.ಆರ್.ಕ್ಷೇತ್ರ. ಶಾಸಕ ರಾಮದಾಸ್ ನೇತೃತ್ವದಲ್ಲಿ ಬೃಹತ್ ಲಸಿಕಾ ಅಭಿಯಾನ ನಡೆದಿದೆ. ಇದಕ್ಕೆ ಹಲವು ಸಂಘ ಸಂಸ್ಥೆಗಳು ಕೂಡ ಸಹಕಾರ ನೀಡಿವೆ. ರಾಜ್ಯದಲ್ಲಿಯು ಕೂಡ ಶೇ.80 ರಷ್ಟು ಲಸಿಕೆ ಆಗಿದೆ. ಆದರೆ ಕೆಲ ಗ್ರಾಮ, ಗುಡ್ಡಗಾಡು ಪ್ರದೇಶದಲ್ಲಿ ಲಸಿಕೆ ಅಭಿಯಾನ ಆಗಬೇಕಿದೆ. ಅಲ್ಲಿ ಜನರು ಮುಂದೆ ಬಂದು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಅವರಿಗೂ ಲಸಿಕೆ ಅರಿವು ಮೂಡಿಸಿ ಲಸಿಕೆ ನೀಡುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.