ಬೆಂಗಳೂರು: ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಸೋಂಕು ತಗುಲಿ ಮೃತಪಟ್ಟ ಅನಾಥ ಶವಗಳ ಅಂತ್ಯಸಂಸ್ಕಾರ ನಡೆಸಿ, ಚಿತಾಭಸ್ಮ ವಿಸರ್ಜನೆ ಮಾಡಿದ್ದ ಸಚಿವ ಆರ್. ಅಶೋಕ್ ಅವರು ಇದೀಗ ಮತ್ತೊಮ್ಮೆ ಅಂತದ್ದೇ ಮಹತ್ವದ ಕಾರ್ಯ ನಡೆಸಲು ಮುಂದಾಗಿದ್ದಾರೆ.
ಕೊರೋನಾದಿಂದ ಮೃತಪಟ್ಟ 1200 ಜನರ ಕುಟುಂಬಸ್ಥರು ಪತ್ತೆಯಾಗದ ಕಾರಣ, ಪಿತೃಪಕ್ಷದ ವೇಳೆ ಶ್ರಾದ್ಧ, ಪಿಂಡ ಪ್ರಧಾನ ನೆರವೇರಿಸಲು ಮುಂದಾಗಿದ್ದಾರೆ. ಆ ಮೂಲಕ ಮೃತಪಟ್ಟವರ ಆತ್ಮಕ್ಕೆ ಸದ್ಗತಿ ಕೋರುವ ಕಾರ್ಯಕ್ಕೆ ಸಚಿವರು ನಿರ್ಧರಿಸಿದ್ದಾರೆ.
ಕೊರೋನಾ ಸೋಂಕಿನಿಂದ ಮೃತಪಟ್ಟ ಅನಾಥರ ಶವಗಳ ಚಿತಾಭಸ್ಮವನ್ನು ಕೆಲ ಸಮಯದ ಹಿಂದಷ್ಟೇ ಶ್ರೀರಂಗಪಟ್ಟಣದ ಬಳಿ ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಲಾಗಿತ್ತು. ಅ. 4 ರಂದು ಶ್ರಾದ್ಧ ಕಾರ್ಯಗಳನ್ನು ನೆರವೇರಿಸಲು ಅಶೋಕ್ ಮುಂದಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.