ಹಾಸನ: ರಾಜ್ಯದಲ್ಲಿ ಮತಾಂತರದಿಂದ ಕೋಮುಗಲಭೆ ನಡೆಯುತ್ತಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಆಕ್ರೋಶ ಹೊರಹಾಕಿದ್ದಾರೆ.
ರಾಜ್ಯದಲ್ಲಿ ಮತಾಂತರ ನಿಷೇಧಕ್ಕೆ ಸೂಕ್ತ ಕಾಯಿದೆ ತರಲಾಗುತ್ತದೆ ಎಂದು ಭರವಸೆ ನೀಡಿದರು. ಮತಾಂತರದ ಮೂಲಕ ತಮ್ಮ ಜನರ ಸಂಖ್ಯೆ ಹೆಚ್ಚಿಸಲು ನೋಡುವುದು ಅಧರ್ಮ. ಹಿಂದೂ ಧರ್ಮ ಜಗತ್ತಿನಲ್ಲೇ ಅತ್ಯಂತ ಪಾವಿತ್ರ್ಯತೆ ಹೊಂದಿದ್ದು, ಮತಾಂತರದಿಂದ ಕೋಮು ಗಲಭೆ ನಡೆಯುತ್ತಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಆರ್ಎಸ್ಎಸ್ನ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ್ದು, ಅವರಿಗೆ ತಾಲೀಬಾನ್ ಮತ್ತು ಆರ್ಎಸ್ಎಸ್ ನಡುವಿನ ವ್ಯತ್ಯಾಸ ಗೊತ್ತಿಲ್ಲ. ರಾಜಕೀಯ ಮಾಡಲು ಆರ್ಎಸ್ಎಸ್ನ ಹೆಸರನ್ನು ಎಳೆದು ತರುತ್ತಿದ್ದಾರೆ. ಅವರಿಗೆ ಯಾವುದೇ ಬೇರೆ ಅಸ್ತ್ರವಿಲ್ಲದೆ ಹೀಗೆ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ದೇಶ ಮತ್ತು ವ್ಯಕಿ ಎಂಬ ವಿಚಾರ ಬಂದಾಗ ಆರ್ಎಸ್ಎಸ್ ದೇಶದ ಪರ ನಿಲ್ಲುತ್ತದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.