ನವದೆಹಲಿ: ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಅವರಿಗೆ ಶ್ರದ್ಧಾಂಜಲಿ ಸಮರ್ಪಿಸಿದರು.
ಟ್ವೀಟ್ ಮಾಡಿರುವ ಮೋದಿ, “ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯಂದು ಅವರಿಗೆ ಶ್ರದ್ಧಾಂಜಲಿಗಳು. ಅವರ ಜೀವನ ಮೌಲ್ಯಾಧಾರಿತವಾಗಿತ್ತು, ಅವರ ತತ್ವಗಳು ಪ್ರತಿ ದೇಶವಾಸಿಗೂ ಸ್ಪೂರ್ತಿಯ ಮೂಲವಾಗಿದೆ” ಎಂದಿದ್ದಾರೆ.
पूर्व प्रधानमंत्री लाल बहादुर शास्त्री जी को उनकी जयंती पर शत-शत नमन। मूल्यों और सिद्धांतों पर आधारित उनका जीवन देशवासियों के लिए हमेशा प्रेरणास्रोत बना रहेगा।
— Narendra Modi (@narendramodi) October 2, 2021
ಭಾರತದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಅಕ್ಟೋಬರ್ 2, 1904 ರಂದು ಉತ್ತರ ಪ್ರದೇಶದ ಮೊಘಲ್ಸರೈ ಜಿಲ್ಲೆಯಲ್ಲಿ ಜನಿಸಿದರು.
ಶಾಸ್ತ್ರಿ 1964 ರಲ್ಲಿ ಭಾರತದ ಪ್ರಧಾನಿಯಾದರು ಮತ್ತು 1965 ರಲ್ಲಿ ಭಾರತ-ಪಾಕಿಸ್ತಾನ ಯುದ್ಧದ ಸಮಯದಲ್ಲಿ ದೇಶವನ್ನು ಮುನ್ನಡೆಸಿದರು. ಅವರು “ಜೈ ಜವಾನ್ ಜೈ ಕಿಸಾನ್” ಎಂಬ ಘೋಷವಾಕ್ಯವನ್ನು ರಚಿಸಿದರು, ಇದು ದೇಶವ್ಯಾಪಿ ಪ್ರತಿಧ್ವನಿಸಿತು. ಜನವರಿ 11, 1966 ರಂದು ಅವರು ತಾಷ್ಕೆಂಟ್ನಲ್ಲಿ ಕೊನೆಯುಸಿರೆಳೆದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.