ಬೆಂಗಳೂರು: ದೇಶದ ನೆಚ್ಚಿನ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು 20 ವರ್ಷಗಳ ಸೇವೆ ಮತ್ತು ಸಮರ್ಪಣೆಯ ಆಡಳಿತ ಪೂರೈಸಿದ ಹಿನ್ನೆಲೆಯಲ್ಲಿ ಮತ್ತು ಅವರ ಜನ್ಮದಿನವಾದ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 7ರ ತನಕ ಮಾನ್ಯ ಪ್ರಧಾನಮಂತ್ರಿಗಳಿಗೆ ಶುಭಾಶಯ, ಅಭಿನಂದನಾ ಪತ್ರ ಬರೆಯುವ ಪೋಸ್ಟ್ ಕಾರ್ಡ್ ಮಹಾ ಅಭಿಯಾನ ನಡೆಯುತ್ತಿದೆ. ಇದರ ಅಂಗವಾಗಿ ಪಕ್ಷದ ರಾಜ್ಯಾಧ್ಯಕ್ಷರು ಮತ್ತು ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಪ್ರಧಾನಿಯವರಿಗೆ ಶುಭಾಶಯ ಕೋರಿ ಅಂಚೆ ಕಾರ್ಡ್ ಬರೆದು ಕಾರ್ಯಕರ್ತರು, ಮುಖಂಡರಿಗೆ ಮಾದರಿ ಆಗಿದ್ದಾರೆ.
“ನಮ್ಮ ನೆಚ್ಚಿನ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರಿಗೆ ಸಾದರ ವಂದನೆಗಳು ಮತ್ತು ಜನುಮದಿನದ ಹಾರ್ದಿಕ ಶುಭಾಶಯಗಳು. ತಮ್ಮ 20 ವರ್ಷದ ಅಧಿಕಾರಾವಧಿಯಲ್ಲಿ ಶೋಷಿತರ, ಹಿಂದುಳಿದ ವರ್ಗಗಳ, ಬಡವರ ಹಾಗೂ ಸರ್ವ ವರ್ಗದ ಪರ ಯೋಜನೆಗಳು- ಅಭಿವೃದ್ಧಿ ಪರವಾದ ಆಡಳಿತ, ಭ್ರಷ್ಟಾಚಾರರಹಿತ ಅಧಿಕಾರಾವಧಿ, ಅತ್ಯುತ್ತಮ ಆಡಳಿತ- ದಾಖಲೆಯ ಪ್ರಮಾಣದಲ್ಲಿ ಕೋವಿಡ್ ಲಸಿಕೆ ನೀಡುತ್ತಿರುವುದು ಅಭಿನಂದನೀಯ” ಎಂದು ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
“ಭಾರತವನ್ನು ವಿಶ್ವಗುರುವನ್ನಾಗಿಸುವ ತಮ್ಮ ಮಹೋನ್ನತ ಸಂಕಲ್ಪ ಸಾಕಾರಗೊಳಿಸುವಂತಹ ಸೌಭಾಗ್ಯ- ಆಯುರಾರೋಗ್ಯವನ್ನು ತಾಯಿ ಭಾರತಾಂಬೆ ಕರುಣಿಸಲಿ” ಎಂದು ಅವರು ಹಾರೈಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.