ಬೆಂಗಳೂರು: ಕರ್ನಾಟಕ – ತಮಿಳುನಾಡು ನಡುವಿನ ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದ್ದು, ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕಾನೂನು ರೂಪಿಸಲು ತಮಿಳುನಾಡಿಗೆ ಯಾವುದೇ ಹಕ್ಕಿಲ್ಲ. ತಮಿಳುನಾಡು ರಾಜಕೀಯ ಲಾಭಕ್ಕಾಗಿ ಈ ವಿಷಯವನ್ನು ಬಳಸುತ್ತಿದೆ ಎಂದು ಅವರು ಹೇಳಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಹೊಂದಿರುವ ನಿಲುವಿನ ಬಗ್ಗೆ ಎಲ್ಲರಿಗೂ ತಿಳಿದಿದೆ. ತಮಿಳುನಾಡು ರಾಜಕಾರಣಿಗಳು ಈ ವಿಷಯವನ್ನು ಚುನಾವಣಾ ಲಾಭಕ್ಕಾಗಿ ಬಳಕೆ ಮಾಡುತ್ತಿದ್ದಾರೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಯೋಜನೆಯ ಅನುಷ್ಠಾನ ಅವರ ಕೈಯಲ್ಲಿಲ್ಲ. ಆದರೆ ಕರ್ನಾಟಕಕ್ಕೆ ಆ ಅಧಿಕಾರ ಇದ್ದು, ನಾವು ಆ ಯೋಜನೆಯನ್ನು ಅನುಷ್ಠಾನಕ್ಕೆ ತರುತ್ತೇವೆ. ನಮ್ಮ ನಿಲುವಿನಲ್ಲಿ ನಾವು ದೃಢವಾಗಿದ್ದೇವೆ ಎಂದು ಅವರು ಹೇಳಿದ್ದಾರೆ.
ಈ ಯೋಜನೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ತಮಿಳುನಾಡಿಗಿಲ್ಲ. ಕಾನೂನು ಹೋರಾಟದ ಮೂಲಕವೇ ಈ ಯೋಜನೆಯನ್ನು ಕರ್ನಾಟಕ ಜಾರಿಗೆ ತರುತ್ತದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.