ನವದೆಹಲಿ: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯವು ಅಧೀನ ಸಾಲದ ಕ್ರೆಡಿಟ್ ಗ್ಯಾರಂಟಿ ಯೋಜನೆಯನ್ನು (ಸಿಜಿಎಸ್ಎಸ್ಡಿ) ಇನ್ನೂ ಆರು ತಿಂಗಳು ವಿಸ್ತರಿಸಲಾಗುವುದು ಎಂದು ತಿಳಿಸಿದೆ.
ಮೂಲತಃ ಆತ್ಮನಿರ್ಭರ ಭಾರತ್ ಪ್ಯಾಕೇಜ್ ಅಡಿಯಲ್ಲಿ ಘೋಷಿಸಿದ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಯೋಜನೆಯು ಈಗ ಮಾರ್ಚ್ 31, 2022 ರವರೆಗೆ ಜಾರಿಯಲ್ಲಿರುತ್ತದೆ.
ಕೇಂದ್ರ ಸರ್ಕಾರ ಈಗ ಸಿಜಿಎಸ್ಎಸ್ಡಿ ವಿಸ್ತರಿಸಲು ನಿರ್ಧರಿಸಿದೆ. ಸೆಪ್ಟೆಂಬರ್ 31, 2021 ರವರೆಗೆ ಕಾರ್ಯನಿರ್ವಹಿಸಬೇಕಿದ್ದ ಯೋಜನೆಯನ್ನು ಈಗ ಕೋರಿಕೆಯ ಮೇರೆಗೆ ಮಾರ್ಚ್ 31, 2022 ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
‘ಒತ್ತಡದಲ್ಲಿರುವ ಆಸ್ತಿಗಳ ನಿಧಿ – ಒತ್ತಡದಲ್ಲಿರುವ ಎಂಎಸ್ಎಂಇಗಳಿಗೆ ಅಧೀನ ಸಾಲ’ ಅನ್ನು ಮೇ 13, 2020 ರಂದು ಆತ್ಮನಿರ್ಭರ ಭಾರತ್ ಪ್ಯಾಕೇಜ್ನ ಭಾಗವಾಗಿ ಘೋಷಿಸಲಾಯಿತು.
ಒತ್ತಡಕ್ಕೊಳಗಾದ ಎಂಎಸ್ಎಂಇ ಘಟಕಗಳಿಗೆ ಸಹಾಯದ ಮಾರ್ಗಗಳನ್ನು ತೆರೆದಿಡಲು ಈ ಯೋಜನೆಯನ್ನು ಈ ಹಿಂದೆ ಸೆಪ್ಟೆಂಬರ್ವರೆಗೆ ಆರು ತಿಂಗಳು ವಿಸ್ತರಿಸಲಾಗಿದೆ ಎಂದು ಸಚಿವಾಲಯ ಬಹಿರಂಗಪಡಿಸಿತ್ತು. ಇದೀಗ ಕೇಂದ್ರವು ಯೋಜನೆಯನ್ನು ಮಾರ್ಚ್ 2022 ರವರೆಗೆ ವಿಸ್ತರಿಸಲಾಗುವುದು ಎಂದು ಘೋಷಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.