ಮೈಸೂರು: ಕೊರೋನಾ ನಡುವೆಯೇ ಈ ಬಾರಿಯೂ ದಸರಾ ಹಬ್ಬ ಆಚರಿಸಲ್ಪಡುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ.
ಮೈಸೂರು ಹೊರತುಪಡಿಸಿ ಬೇರೆ ಕಡೆಗಳಲ್ಲಿ ಆಚರಿಸಲ್ಪಡುವ ದಸರಾ ಮಹೋತ್ಸವದಲ್ಲಿ 400 ಕ್ಕಿಂತ ಅಧಿಕ ಜನರು ಒಮ್ಮೆಗೇ ಒಟ್ಟು ಸೇರುವಂತಿಲ್ಲ ಎಂದು ಮಾರ್ಗಸೂಚಿ ತಿಳಿಸಿದೆ. ಮೈಸೂರು ಪ್ರತ್ಯೇಕ ಮತ್ತು ಮೈಸೂರು ಹೊರತು ಪಡಿಸಿ ಎರಡು ರೀತಿಯ ಮಾರ್ಗಸೂಚಿಗಳನ್ನು ಸರ್ಕಾರ ಇದೀಗ ಪ್ರಕಟಿಸಿದೆ.
ಮೈಸೂರಿಗೆ ಸಂಬಂಧಿಸಿದಂತೆ, ಅರಮನೆ ಆವರಣದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಮಾಸ್ಕ್, ಸಾಮಾಜಿಕ ಅಂತರ, ಸ್ಯಾನಿಟೈಸರ್ ಕಡ್ಡಾಯ ಎಂದು ತಿಳಿಸಲಾಗಿದೆ. ಅ. 7 ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ನಡೆಯಲಿದ್ದು, ಅಲ್ಲಿಗೆ 100 ಜನರಿಗೆ ಮಾತ್ರ ಭಾಗವಹಿಸುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿನಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 500 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಅ. 15 ರಂದು ನಡೆಯುವ ಜಂಬೂಸವಾರಿ, ಪಂಜಿನ ಕವಾಯತ್ಗೆ 500 ಜನರಿಗೆ ಅವಕಾಶ ಕಲ್ಪಿಸಲಾಗಿದೆ.
ಆಚರಣೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅಧಿಕಾರಿಗಳು, ಸಿಬ್ಬಂದಿ, ಕಲಾವಿದರು, ರಕ್ಷಣಾ ಸಿಬ್ಬಂದಿ ಅ. 4 ರ ನಂತರದ ಆರ್ಟಿಪಿಸಿಆರ್ ವರದಿ ಮತ್ತು ಕನಿಷ್ಟ 1 ಡೋಸ್ ಲಸಿಕೆ ಪಡೆದಿರುವಂತೆಯೂ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಹಾಗೆಯೇ ಇತರೆಡೆಗಳಲ್ಲಿ ನಡೆಯುವ ದಸರಾಗೆ ಸಾಮಾಜಿಕ ಅಂತರ ಕಡ್ಡಾಯ. 400 ಜನರಿಗಷ್ಟೇ ಸೇರುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಎಲ್ಲಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.
ದಿನಾಂಕ:07.10.2021 ರಿಂದ ದಿನಾಂಕ:15.10.2021ರವರೆಗೆ ರಾಜ್ಯಾದಂತ ನಾಡಹಬ್ಬ ದಸರಾ/ದುರ್ಗಾಪೂಜೆಯನ್ನು ಆಚರಿಸುವ ಕುರಿತು ಮಾರ್ಗಸೂಚಿಗಳು.https://t.co/DfiOLiLp5z
— K'taka Health Dept (@DHFWKA) October 5, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.