ನವದೆಹಲಿ: ರಸ್ತೆ ಅಪಘಾತಕ್ಕೆ ಒಳಗಾದವರನ್ನು ತುರ್ತು ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ಸಾಗಿಸಿ ಜೀವ ಕಾಪಾಡಲು ಪ್ರಯತ್ನಿಸುವ ಉತ್ತಮ ಜನರಿಗಾಗಿ ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಯೋಜನೆಯೊಂದನ್ನು ಕಾರ್ಯರೂಪಕ್ಕೆ ತಂದಿದೆ.
ಈ ಯೋಜನೆಯಡಿ ಅಪಘಾತಕ್ಕೆ ಒಳಗಾಗಿ ಗಾಯಗೊಂಡವರನ್ನು ‘ಗೋಲ್ಡನ್ ಅವರ್’ ಒಳಗಡೆ ಆಸ್ಪತ್ರೆಗೆ ದಾಖಲಿಸಿ ಜೀವ ಉಳಿಸುವವರಿಗೆ 5000 ರೂಪಾಯಿಗಳ ಬಹುಮಾನ ದೊರೆಯಲಿದೆ.
2021ರ ಅಕ್ಟೋಬರ್ 15ರಿಂದ 2026ರ ಮಾರ್ಚ್ 31ರವರೆಗೆ ಈ ಯೋಜನೆ ಜಾರಿಯಲ್ಲಿ ಇರಲಿದೆ ಎಂದು ಸಚಿವಾಲಯವು ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಾರಿಗೆ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದೆ.
ಇಷ್ಟೇ ಅಲ್ಲದೆ, ರಾಷ್ಟ್ರಮಟ್ಟದಲ್ಲಿ ಈ ರೀತಿಯ 10 ಅತ್ಯುತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡಿ ಪ್ರಶಸ್ತಿ ಮತ್ತು 1 ಲಕ್ಷ ರೂಪಾಯಿಗಳ ಬಹುಮಾನವನ್ನು ಕೂಡ ನೀಡಲಾಗುತ್ತದೆ.
ಆರಂಭಿಕ ಅನುದಾನವಾಗಿ ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವಾಲಯವು ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಾರಿಗೆ ಇಲಾಖೆಗಳಿಗೆ 5 ಲಕ್ಷ ರೂಪಾಯಿಗಳನ್ನು ಈ ಉದ್ದೇಶಕ್ಕಾಗಿ ಒದಗಿಸಲಿದೆ.
ರಸ್ತೆ ಅಪಘಾತಕ್ಕೊಳಗಾದವರನ್ನು ಕ್ಷಿಪ್ರಗತಿಯಲ್ಲಿ ಆಸ್ಪತ್ರೆಗೆ ಸಾಗಿಸಲು ಸಾರ್ವಜನಿಕರನ್ನು ಪ್ರೇರಿಪಿಸುವ ಸಲುವಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.