ಹುಬ್ಬಳ್ಳಿ: ವಿದ್ಯಾರ್ಥಿಗಳಿಗೆ ಹೈಸ್ಕೂಲ್ನಿಂದಲೇ ತಾಂತ್ರಿಕ ಶಿಕ್ಷಣ ನೀಡಬೇಕು. ತಾಂತ್ರಿಕ ಶಿಕ್ಷಣ ಆಧರಿಸಿ ಶಿಕ್ಷಣ ನೀಡುವ ಶಾಲೆಗಳನ್ನು ಆರಂಭ ಮಾಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅವರು ಬಿಯಾಂಡ್ ಬೆಂಗಳೂರು ‘ ಇನ್ನೋವೇಷನ್ ಮತ್ತು ಇಂಪ್ಯಾಕ್ಟ್ ಹುಬ್ಬಳ್ಳಿ’ ಕಾರ್ಯಕ್ರಮವನ್ನು ವರ್ಚುವಲ್ ಮೂಲಕ ಉದ್ಘಾಟಿಸಿ ಮಾತನಾಡಿದರು.
ತಾಂತ್ರಿಕ ಶಿಕ್ಷಣದಿಂದ ವಿದ್ಯುತ್ಗಳಲ್ಲಿ ಗ್ರಹಿಕೆಯ ಶಕ್ತಿ ಹೆಚ್ಚುತ್ತದೆ. ಆದ್ದರಿಂದ ತಾಂತ್ರಿಕ ಶಿಕ್ಷಣಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಬೇಕಿದೆ. ಪಾಲಿಟೆಕ್ನಿಕ್ ಕಾಲೇಜುಗಳನ್ನು ಉನ್ನತ ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಅಟಲ್ ಟಿಂಕರಿಂಗ್ ಲ್ಯಾಬ್ಗಳನ್ನು ಉನ್ನತ ದರ್ಜೆಗೆ ಏರಿಸುವ ಮೂಲಕ ಮಕ್ಕಳಲ್ಲಿ ಸಂಶೋಧನಾ ಮನೋಭಾವ ಹೆಚ್ಚಿಸಬೇಕು ಎಂದೂ ಅವರು ತಿಳಿಸಿದ್ದಾರೆ.
ಉತ್ತರ ಕರ್ನಾಟಕದಲ್ಲಿ ಪ್ರತಿಭೆಗಳಿದ್ದಾರೆ. ಅವರಿಗೆ ಸರಿಯಾದ ಅವಕಾಶ ಕಲ್ಪಿಸಿಕೊಡುವ ಕೆಲಸವಾಗಬೇಕು. ಬೆಂಗಳೂರು, ಪುಣೆಯಲ್ಲಿನ ಐಟಿ ಬಿಟಿ ಕಂಪೆನಿಗಳಲ್ಲಿ ಉತ್ತರ ಕರ್ನಾಟಕದ ಹಲವು ಪ್ರತಿಭೆಗಳಿದ್ದಾರೆ ಎಂದು ಅವರು ಹೇಳಿದ್ದಾರೆ.
ಮುಖ್ಯಮಂತ್ರಿ @BSBommai ಅವರು ಇಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ವತಿಯಿಂದ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ 'ನಾವೀನ್ಯತೆ ಮತ್ತು ಪರಿಣಾಮ' ಕುರಿತ ಕಾರ್ಯಕ್ರಮವನ್ನು ವರ್ಚುಯಲ್ ಮಾಧ್ಯಮದ ಮುಖಾಂತರ ಉದ್ಘಾಟಿಸಿದರು. (1/2)#InnovationAndImpact pic.twitter.com/6YfxOBJoTa
— CM of Karnataka (@CMofKarnataka) October 5, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.