ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರಪ್ರದೇಶದಲ್ಲಿ ಆಯೋಜಿಸಲಾದ “Azadi@75-ಹೊಸ ನಗರ ಭಾರತ: ನಗರ ಭೂ ದೃಶ್ಯಗಳ ಪರಿವರ್ತನೆ” ಕಾನ್ಫರೆನ್ಸ್ ಮತ್ತು ಎಕ್ಸ್ಪೋ ಅನ್ನು ಇಂದು ಉದ್ಘಾಟನೆಗೊಳಿಸಿದರು ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆ ನಗರ ಅಡಿಯಲ್ಲಿ ನಿರ್ಮಿಸಲಾದ ಮನೆಗಳನ್ನು 75,000 ಫಲಾನುಭವಿಗಳಿಗೆ ಡಿಜಿಟಲ್ ವಿಧಾನದಲ್ಲಿ ಹಸ್ತಾಂತರ ಮಾಡಿದರು.
ಪ್ರಧಾನಿ ಮೋದಿಯವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಗವರ್ನರ್ ಆನಂದಿ ಪಟೇಲ್ ಅವರ ಜೊತೆ ಲಕ್ನೋದ ಇಂದಿರಾಗಾಂಧಿ ಪ್ರತಿಷ್ಠಾನಕ್ಕೆ ಆಗಮಿಸಿ, ಎಕ್ಸ್ಪೋದಲ್ಲಿ ಆಯೋಜಿಸಲಾದ ಮೂರು ಪ್ರದರ್ಶನಗಳಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮೋದಿ ಆಯೋಧ್ಯ ಅಭಿವೃದ್ಧಿಯ ಮಾಸ್ಟರ್ ಪ್ಲಾನ್ ಬಗ್ಗೆ ವಿಚಾರಿಸಿದರು. ಪ್ರಧಾನಮಂತ್ರಿ ಅವಾಸ್ ಯೋಜನೆ – ನಗರ ಅಡಿಯಲ್ಲಿ ನಿರ್ಮಿಸಲಾದ ಮನೆಗಳನ್ನು ಅದರ ಫಲಾನುಭವಿಗಳಿಗೆ ವಿತರಿಸಿದರು ಮತ್ತು ಅವರೊಂದಿಗೆ ಸಂವಾದ ನಡೆಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.